Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜು.9ರಂದು ಅರಮನೆ ಮೈದಾನದಲ್ಲಿ ರಾಜ್ ಸಂಭ್ರಮ
ಬೆಂಗಳೂರು : ನಟ ಡಾ.ರಾಜ್ ಕುಮಾರ್ ಅವರನ್ನು ಕರ್ನಾಟಕ ಸರ್ಕಾರ ಸನ್ಮಾನಿಸುವ ‘ ಸಾರ್ಥಕ ಸಂಭ್ರಮ’ ಕಾರ್ಯಕ್ರಮವನ್ನು ನಗರದಲ್ಲಿ ಜುಲೈ 9ರಂದು ಆಯೋಜಿಸಲಾಗಿದೆ.
ನಗರದ ಅರಮನೆ ಆವರಣದಲ್ಲಿ ಜುಲೈ 9ರಂದು ಸಂಜೆ 7ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕನ್ನಡ ಬೆಳ್ಳಿತೆರೆಗೆ ರಾಜ್ಕುಮಾರ್ ಸಲ್ಲಿಸಿದ ಐದು ದಶಕಗಳ ಸೇವೆಗೆ ಕೃತಜ್ಞತೆ ಸಲ್ಲಿಸಲು, ರಾಜ್ಯ ಸರ್ಕಾರ ಈ ಕಾರ್ಯಕ್ರಮವನ್ನು ಸಂಘಟಿಸಿದೆ.
77ನೇ ವಸಂತದಲ್ಲಿ ಇಂತಹ ಪುಳಕ ರಾಜ್ ಪಾಲಿಗೆ, ವಿಶೇಷವಾಗಿ ಅವರ ಅಭಿಮಾನಿಗಳಿಗೆ ಲಭ್ಯವಾಗಿದೆ. ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಸೇರಿದಂತೆ ಸಚಿವರ ದಂಡು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯ ಹಿರಿಕಿರಿಯರೆಲ್ಲಾ ‘ಸಾರ್ಥಕ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಸಿ.ಅಶ್ವತ್ಥ್ ನೇತೃತ್ವದಲ್ಲಿ ನಡೆದ ‘ಕನ್ನಡವೇ ಸತ್ಯ’ ಕಾರ್ಯಕ್ರಮವನ್ನು ಮರೆಯಲಾಗದ ನೆನಪುಗಳನ್ನಾಗಿಸಿದ ಗ್ಲೋಬಲ್ ಕನ್ಸಲ್ಟೆಂಟ್ಗೆ ಕಾರ್ಯಕ್ರಮದ ನಿರ್ವಹಣೆಯ ಹೊಣೆ ಹೊತ್ತಿದೆ.
ಕಳೆದ ಮೇ ತಿಂಗಳಲ್ಲಿ ಆಯೋಜಿಸಲಾಗಿದ್ದ ಈ ‘ಸಾರ್ಥಕ ಸಂಭ್ರಮ’ ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ಚಾಮರಾಜಪೇಟೆ ಮರುಚುನಾವಣೆಗಳ ಹಿನ್ನೆಲೆಯಲ್ಲಿ ಸರ್ಕಾರ ಮುಂದೂಡಿತ್ತು.
(ಏಜನ್ಸೀಸ್)
ಮುಖಪುಟ / ಸ್ಯಾಂಡಲ್ವುಡ್