Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏ.4ರಂದು ಚಿತ್ರಮಂದಿರಗಳಲ್ಲಿ 'ಆಕ್ಸಿಡೆಂಟ್'!
'ರಾಮ ಶ್ಯಾಮ ಭಾಮ' ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ ನಟ ರಮೇಶ್ ಅರವಿಂದ್ 'ಸತ್ಯವಾನ್ ಸಾವಿತ್ರಿ'ಯನ್ನು ನಿರ್ದೇಶಿಸಿ ನೋಡುಗರಿಗೆ ನಗೆಯ ರಸದೌತಣ ನೀಡಿದ್ದರು. ಈ ವಾರ ರಮೇಶ್ ಅವರ ನಿರ್ದೇಶನದ ತೃತೀಯ ಚಿತ್ರ 'ಆಕ್ಸಿಡೆಂಟ್' ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ.
ಸಾಫ್ಟ್ವೇರ್ ಸಂಸ್ಥೆಯೊಂದರ ಮಾಲೀಕರಾದ ರಘುನಾಥ್ ವಿಶಿಷ್ಟ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೌತುಕ ಘಟ್ಟಗಳನ್ನೊಳಗೊಂಡಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. 'ಆಕ್ಸಿಡೆಂಟ್'ಗಾಗಿ ಅಪಾರ ಶ್ರಮ ವಹಿಸಿರುವ ನಿರ್ಮಾಪಕ ರಘುನಾಥ್ ಹಾಗೂ ನಿರ್ದೇಶಕ ರಮೇಶ್ ಅರವಿಂದ್ 11 ಮಂದಿ ಹೊಸ ಪ್ರತಿಭೆಗಳನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತ್ತಿದ್ದಾರೆ.
ಹೊಸತನವನ್ನೊಳಗೊಂಡ ಸದಭಿರುಚಿಯ ಚಿತ್ರವನ್ನು ಪ್ರೇಕ್ಷಕರಿಗೆ ನೀಡಬೇಕೆಂಬ ಇರಾದೆ ಇಟ್ಟುಕೊಂಡಿರುವ ನಿರ್ದೇಶಕ ರಮೇಶ್ಅರವಿಂದ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಜಿ.ಎಸ್.ಭಾಸ್ಕರ್ ಅವರ ಛಾಯಾಗ್ರಹಣ, ರಿಕ್ಕಿಕೇಜ್ ಸಂಗೀತ, ಸೌಂದರ್ರಾಜ್ ಸಂಕಲನ, ರಾಜೇಂದ್ರ ಕಾರಂತ್ ಸಂಭಾಷಣೆ, ಚಿನ್ನಿಪ್ರಕಾಶ್ ನೃತ್ಯ, ರವಿವರ್ಮ ಸಾಹಸ, ರವಿಜೋಷಿ ಅವರ ನಿರ್ಮಾಣ ಸಾರಥ್ಯವಿರುವ ಚಿತ್ರದ ತಾರಾಬಳಗದಲ್ಲಿ ರಮೇಶ್ಅರವಿಂದ್, ರೇಖಾ, ಪೂಜಾಗಾಂಧಿ, ಮೋಹನ್, ತಿಲಕ್, ಬಾಲಾಜಿ, ರಾಜೇಂದ್ರ ಕಾರಂತ್, ಮಹೇಶ್, ಸುಧಾರಾಣಿ, ಸತಿ ಐಯ್ಯರ್, ರೋಷನ್ ಮುಂತಾದವರಿದ್ದಾರೆ. ನಿರ್ದೇಶಕ ದಿನೇಶ್ಬಾಬು ಪೋಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.
(ದಟ್ಸ್ಕನ್ನಡ ಸಿನಿವಾರ್ತೆ)