Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡೆಡ್ಲಿ ಸೋಮ' ಆದಿತ್ಯಾ ಪ್ರಾಣಾಪಾಯದಿಂದ ಪಾರು
'ಡೆಡ್ಲಿ ಸೋಮ ಭಾಗ 2' ಸಾಹಸ ಸನ್ನಿವೇಶ ಚಿತ್ರೀಕರಣದ ವೇಳೆ ನಟ ಆದಿತ್ಯಾ ಗಾಯಗೊಂಡಿದ್ದಾರೆ. ಅವರ ಬೆನ್ನು ಹಾಗೂ ಸೊಂಟಕ್ಕೆ ಪೆಟ್ಟಾಗಿದ್ದು ಚಿಕಿತ್ಸೆಗಾಗಿ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಬೆಂಗಳೂರು ಯಲಹಂಕ ಸಮೀಪದ ಫ್ಯಾಕ್ಟರಿಯೊಂದರಲ್ಲಿ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ನಿರ್ದೇಶನದಲ್ಲಿ 'ಡೆಡ್ಲಿ ಸೋಮ ಭಾಗ 2' ಚಿತ್ರೀಕರಣ ನಡೆಯುತ್ತಿತ್ತು. ಡ್ಯೂಪಿಲ್ಲದೆಯೇ ಸಾಹಸ ಸನ್ನಿವೇಶವೊಂದರಲ್ಲಿ ಆದಿತ್ಯಾ ಮಾಡುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಚಿತ್ರೀಕರಣ ವೇಳೆ ಆದಿತ್ಯಾ 25 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರು.
ಸಾಹಸ ಸನ್ನಿವೇಶದ ಚಿತ್ರೀಕರಣ ವೇಳೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಹಾಗಾಗಿ ಆದಿತ್ಯಾ ಅವರಿಗೆ ಯಾವುದೇ ಗಂಭೀರ ಗಾಯಗಳು ಆಗಿಲ್ಲ ಎಂದು ಸಾಹಸ ನಿರ್ದೇಶನ ಥ್ರಿಲ್ಲರ್ ಮಂಜು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಆದಿತ್ಯಾ ಅವರ ತಂದೆ ರಾಜೇಂದ್ರ ಸಿಂಗ್ ಬಾಬು ಪ್ರತಿಕ್ರಿಯಿಸುತ್ತಾ, ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಯಾರದೂ ಏನು ತಪ್ಪಿಲ್ಲ. ಸಾಹಸ ಚಿತ್ರೀಕರಣ ಎಂದರೆ ಇದೆಲ್ಲಾ ಸಾಮಾನ್ಯ. ಆದಿತ್ಯ ಗಂಭೀರವಾಗಿಯೇನು ಗಾಯಗೊಂಡಿಲ್ಲ, ಆರಾಮವಾಗಿಯೇ ಇದ್ದಾನೆ. ಎಕ್ಸ್ ರೇ ಫಲಿತಾಂಶ ಬಂದ ನಂತರ ಆದಿತ್ಯ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿಯಲಿದೆ ಎಂದಿದ್ದಾರೆ.
ರವಿಶ್ರೀವತ್ಸ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಜಾಕ್ ಮಂಜು ಮತ್ತು ಶೋಭಾ ರಾಜಣ್ಣ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಸಂಗೀತ ಸಾಧುಕೋಕಿಲ. ಮುಖ್ಯಭೂಮಿಕೆಯಲ್ಲಿ ಆದಿತ್ಯಾ ಮತ್ತು ಪ್ರೀತಾ ರಾವ್ ಅಭಿನಯಿಸುತ್ತಿದ್ದಾರೆ.