Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಕ್ತ ಕುಂಬಾರನಾಗಿ ಹ್ಯಾಟ್ರಿಕ್ ಹೀರೋ ಶಿವಣ್ಣ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭಕ್ತಿ ಪ್ರಧಾನ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. ಆದರೆ ಸದ್ಯಕ್ಕಂತೂ ಅಲ್ಲ ಎಂಬುದು ನಿಮ್ಮ ಗಮನಕ್ಕಿರಲಿ. 'ಭಕ್ತ ಕುಂಬಾರ-2' ಚಿತ್ರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುಳಿವನ್ನ್ನು ಶಿವಣ್ಣ ಕೊಟ್ಟಿದ್ದಾರೆ. ಮುಂಚಿನಿಂದಲೂ ಭಕ್ತಿ ಪ್ರಧಾನ ಚಿತ್ರಗಳಲ್ಲಿ ಅಭಿನಯಿಸಬೇಕು ಎಂಬ ತುಡಿತ ಶಿವಣ್ಣನದು. ಈ ಆಸೆ ಭಕ್ತ ಕುಂಬಾರ-2 ಚಿತ್ರದ ಮೂಲಕ ನೆರವೇರಲಿದೆ.
ಹಾಗೆಯೇ ಗೋಕರ್ಣವನ್ನು ಮೂಲವಾಗಿಟ್ಟುಕೊಂಡು ಶಿವಣ್ಣನ ಮತ್ತೊಂದು ಭಕ್ತಿ ಪ್ರಧಾನ ಚಿತ್ರವನ್ನು ಗುರು ಪ್ರಸಾದ್ ನಿರ್ದೇಶಿಸಲಿದ್ದಾರೆ. ಅಪ್ಪಾಜಿ ಅವರಂತೆ ಪೌರಾಣಿಕ ಚಿತ್ರಗಳಲ್ಲಿ ಅಭಿನಯಿಸಬೇಕು ಎಂದು ಶಿವಣ್ಣನ ತೀರ್ಮಾನಿಸಿದ್ದಾರೆ. ಕೇವಲ ಮನರಂಜನೆಗಾಗಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಪ್ರೇಕ್ಷಕರು ಸಂದೇಶಾತ್ಮಕ ಚಿತ್ರಗಳನ್ನು ನಿರೀಕ್ಷಿಸುತ್ತಿದ್ದಾರೆ ಎನ್ನುತ್ತಾರೆ ಶಿವಣ್ಣ್ಣ.
ಅಪ್ಪಾಜಿ, ಅಮಿತಾಬ್, ಕಮಲಹಾಸನ್ ನನ್ನ ಮಾದರಿ ವ್ಯಕ್ತಿಗಳು ಎನ್ನುವ ಶಿವಣ್ಣ, ಸ್ವಪ್ರಯತ್ನದಿಂದ ಸಾಧಿಸುವ ಉದ್ದೇಶ ಅವರದು. 1974ರಲ್ಲಿ ಬಿಡುಗಡೆಯಾಗಿದ್ದ 'ಭಕ್ತ ಕುಂಬಾರ' ಚಿತ್ರದಲ್ಲಿ ರಾಜ್ ಕುಮಾರ್, ಲೀಲಾವತಿ, ಮಂಜುಳ, ಬಾಲಕೃಷ್ಣ, ರಮೇಶ್ ಮುಂತಾದವರು ಅಮೋಘವಾಗಿ ಅಭಿನಯಿದ್ದರು.
ಭಕ್ತ ಕುಂಬಾರದಲ್ಲಿನ ಪುರಂದರ ವಿಠಲನ ಭಕ್ತನಾದ ಗೋರನ ಪಾತ್ರದ ಅಭಿನಯ ಎಲ್ಲಾ ಭಕ್ತಿ ಪಾತ್ರಗಳನ್ನೂ ಮೀರಿಸುತ್ತದೆ ಎಂದರೆ ತಪ್ಪಾಗಲಾರದು. ಡಾ.ರಾಜ್ ಮೂಲಕ ಕನ್ನಡಿಗರಿಗೆ ಭಕ್ತಿರಸ ಉಣಿಸಿದ ಕೀರ್ತಿ ಕನ್ನಡದ ಶ್ರೇಷ್ಠ ನಿರ್ದೇಶಕರಲ್ಲೊಬ್ಬರಾದ ದಿವಂಗತ ಹುಣಸೂರು ಕೃಷ್ಣಮೂರ್ತಿಯವರಿಗೆ ಸಲ್ಲುತ್ತದೆ. ಈಗ ಮತ್ತದೆ ಭಕ್ತಿ ರಸವನ್ನು ಶಿವಣ್ನ ಉಕ್ಕಿಸುವಂತಾಗಲಿ ಎಂಬುದು ಪ್ರೇಕ್ಷಕರ ಒತ್ತಾಸೆ.