Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾತಿನ ಮನೆಯಲ್ಲಿ ಹೊಸ ಪ್ರತಿಭೆಗಳ ಗಗನಸಖಿ
ಸುಮಾರು 15 ವರ್ಷಗಳಿಂದ ಚಿತ್ರರಂಗದಲ್ಲಿದ್ದುಕೊಂಡಿರುವ ಶಿವಕುಮಾರ್ ಇದುವರೆಗೂ 18 ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಬಹಳ ದಿನಗಳ ಅಂತರದ ನಂತರ ಗಗನ ಸಖಿ ಎಂಬ ಮತ್ತೊಂದು ಚಿತ್ರವನ್ನು 2 ತಿಂಗಳ ಹಿಂದೆಯಷ್ಟೇ ಪ್ರಾರಂಭಿಸಿ ಚಿತ್ರೀಕರಣ ಮುಗಿಸಿದ್ದಾರೆ.
ಕಳೆದ ಗುರುವಾರದಿಂದ ಡಬ್ಬಿಂಗ್ ಕಾರ್ಯ ಕೂಡ ಪ್ರಾರಂಭವಾಗಿದೆ. ಮುಗ್ಧ ಯುವಕನೊಬ್ಬನ ಜೀವನದಲ್ಲಿ ದ್ವಂದ್ವ ವ್ಯಕ್ತಿತ್ವದ ಇಬ್ಬರು ಯುವತಿಯರ ಪ್ರವೇಶದಿಂದಾಗಿ ಉಂಟಾಗುವ ವೈಪರೀತ್ಯಗಳನ್ನು ಈ ಚಿತ್ರದಲ್ಲಿ ನಿರೂಪಿಸಲಾಗಿದೆ. ಸುಮಾರು 27 ದಿನಗಳ ಕಾಲ ಒಂದೇ ಹಂತದಲ್ಲಿ ಚಿಕ್ಕಮಗಳೂರು ಸುತ್ತಮುತ್ತ ಶೂಟಿಂಗ್ ಮಾಡಿ ಮುಗಿಸಲಾಗಿದ್ದು, ನಿರ್ದೇಶಕ ಶಿವಕುಮಾರ್ ಅವರೇ ಕಥೆ-ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಬರೆದಿದ್ದಾರೆ.
ಉದ್ಯಮಿ ನಾಗರಾಜ ಅವರ ಜೊತೆ ರಾಮಾಂಜನೇಯ ಹಾಗೂ ರಾಮಚಂದ್ರಪ್ಪ ಸೇರಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಮುತ್ತುರಾಜ್ ಅವರ ಛಾಯಾಗ್ರಹಣ, ಗಂಧರ್ವ ಅವರ ಸಂಗೀತ ಸಂಯೋಜನೆ, ಸಿ.ವಿ. ಶಿವಶಂಕರ್, ಗಂಧರ್ವ, ಶಿವಪ್ರಸಾದ್, ಸುಮತಿ ಅವರ ಸಾಹಿತ್ಯ ಈ ಚಿತ್ರಕ್ಕಿದ್ದು, ಹೊಸ ಪ್ರತಿಭೆ ಡಾ. ಮಾಧವನ್, ಭವಾನಿ ಗಾಂಧಿ (ದ್ವಿಪಾತ್ರ), ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್, ಮಾರಿಮುತ್ತು, ಕರಿಬಸವಯ್ಯ, ಸುರೇಶ ದಾವಣಗೆರೆ, ವಿಜಯಕುಮಾರ ಪ್ರಮುಖ ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)