Don't Miss!
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೈರಸಿ ತಡೆಗೆ ಶೀಘ್ರ ಕಾನೂನು: ಯಡಿಯೂರಪ್ಪ
ಬೆಂಗಳೂರಿನಲ್ಲಿ ಅಮೃತ ಮಹೋತ್ಸವ ಭವನ ನಿರ್ಮಾಣಕ್ಕೆ ರು.5 ಕೋಟಿ ಹಾಗೂ ಸದಭಿರುಚಿಯ ಕನ್ನಡ ಚಲನಚಿತ್ರಗಳಿಗೆ ತಲಾ ರು.10 ಲಕ್ಷ ಸಹಾಯಧನ ನೀಡಲು ರು.2 ಕೋಟಿ ಅನುದಾನ ಒದಗಿಸಿದೆ. ಪೈರಸಿ ತಡೆಗೆ ಸರ್ಕಾರ ಅಗತ್ಯ ಕಾನೂನು ರೂಪಿಸಲಿದೆ ಎಂದು ಯಡಿಯೂರಪ್ಪ ಭರವಸೆ ನೀಡಿದರು.
ಚಿತ್ರರಂಗ ಸಾಮಾನ್ಯ ಜನತೆಯನ್ನು ತಲುಪಬಲ್ಲ ಪ್ರಭಾವಿ ಮಾದ್ಯಮವಾಗಿದೆ. ಅಮೃತ ಮಹೋತ್ಸವ ಆಚರಿಸುತ್ತಿರುವ ಶುಭಸಂದರ್ಭದಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿರುವುದು ಕನ್ನಡದ ಹಿರಿಮೆಯನ್ನು ಹೆಚ್ಚಿಸಿದೆ ಎಂದರು. 75 ವರ್ಷಗಳ ಕಾಲ ಕನ್ನಡ ಚಿತ್ರೋದ್ಯಮಕ್ಕೆ ಶ್ರಮಿಸಿದ ಸಮಸ್ತ ಕಲಾವಿದರು ಮತ್ತು ಅವರ ಕುಟುಂಬಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಗುಬ್ಬಿ ವೀರಣ್ಣ, ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್ ಸೇರಿದಂತೆ ಹಲವರ ಸೇವೆಯನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿದ್ದ ವಾರ್ತಾ ಮತ್ತು ಅಬಕಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾತನಾಡುತ್ತಾ, ಕನ್ನಡದ ಮೊದಲ ವಾಕ್ಚಿತ್ರ ಸತಿ ಸುಲೋಚನಾ ನಿರ್ಮಿಸಿದ ಚಮನಲಾಲ್ ಡೊಂಗಾಜಿ ಕುಟುಂಬದವರನ್ನು ಆಕಸ್ಮಿಕವಾಗಿ ಮರೆತಿದ್ದಕ್ಕೆ ಚಿತ್ರೋದ್ಯಮದ ಪರವಾಗಿ ಕ್ಷಮೆಯಾಚಿಸಿದರು.ಕನ್ನಡ ಚಿತ್ರರಂಗ ಕೇವಲ ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ದೇಶಕ್ಕೆ ಅತ್ಯುತ್ತಮ ಚಿತ್ರಗಳನ್ನು ನೀಡಿ ಹಲವಾರು ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿದೆ. ಕನ್ನಡ ಚಿತ್ರರಂಗದ ಗತವೈಭವ ಮತ್ತೆ ಮರಳಿಬರಬಾರದೇ ಎಂದು ಸಚಿವ ಕಟ್ಟಾ ಹಂಬಲಿಸಿದರು.
ಭಾರತೀಯ ಚಲನಚಿತ್ರದ ಒಕ್ಕೂಟದ ಅಧ್ಯಕ್ಷ ಜಿತೇಂದ್ರ ಜೈನ್, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ರಾಜಗೋಪಾಲ್, ಕೇರಳ ಚಲನಚಿತ್ರ ಮಂಡಳಿ ಅಧ್ಯಕ್ಷ ಫಾಜಲ್ ಗಪೂರ್, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಕೆಸಿಎನ್ ಚಂದ್ರಶೇಖರ್, ನಿರ್ದೇಶಕರ ಸಂಘದ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಕಾರ್ಮಿಕರ, ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಅಶೋಕ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಪ್ರಾಸ್ತಾವಿಕ ಭಾಷಣ ಮಾಡಿದರು. ಸಾ.ರಾ.ಗೋವಿಂದು ಸ್ವಾಗತಿಸಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ರಾಜ್
ಪುಣ್ಯಭೂಮಿಯಲ್ಲಿ
ಅಮೃತ
ಮಹೋತ್ಸವ
ಎಪ್ಪತ್ತೈದರ
ಯೌವನದಲ್ಲಿ
ಕನ್ನಡ
ಚಿತ್ರರಂಗ
ರವಿಚಂದ್ರನ್
ಗರಡಿಯಲ್ಲಿ
ಸುಂದರ
ಸುಂದರಿಯರು!
ಕನ್ನಡ
ಸಿನಿಮಾ
75ಕ್ಕೆ
75ಪುಸ್ತಕ:
ಜಯಮಾಲಾ