Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂದ್ಗೆ ಕನ್ನಡ ಚಿತ್ರೋದ್ಯಮದ ಪೂರ್ಣಬೆಂ'ಬಲ'
ಬೆಂಗಳೂರು, ಏ.2: ತಮಿಳುನಾಡಿನ ವಿವಾದಾತ್ಮಕ ಹೊಗೇನಕಲ್ ಜಲ ವಿವಾದವನ್ನು ವಿರೋಧಿಸಿ ಏ.10ರಂದು ಕರೆ ಕೊಟ್ಟಿರುವ ರಾಜ್ಯ ಬಂದ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಬುಧವಾರ ತಿಳಿಸಿದರು.
ಏಪ್ರಿಲ್ 10ರಂದು ಎಲ್ಲಾ ಚಲನಚಿತ್ರಗಳ ಪ್ರದರ್ಶನವನ್ನು ರದ್ದು ಮಾಡಲಾಗುತ್ತದೆ. ಚಿತ್ರೀಕರಣವನ್ನೂ ಸ್ಥಗಿತಗೊಳಿಸಿ ಬಂದ್ ಆಚರಿಸಲಾಗುವುದು. ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘವೂ ಸಹ ರಾಜ್ಯ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ. ಡಾ.ರಾಜ್ ಅಭಿಮಾನಿಗಳ ಸಂಘವಾಗಲೀ, ಚಲನಚಿತ್ರ ವಾಣಿಜ್ಯ ಮಂಡಳಿಯಾಗಲೀ ಹೋರಾಟಕ್ಕೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಸಾ.ರಾ.ಗೋವಿಂದು ತಿಳಿಸಿದರು.
ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಾ.ರಾ.ಗೋವಿಂದು ಸೇರಿದಂತೆ ನಾಲ್ಕು ಮಂದಿ ಕನ್ನಡಿಗರನ್ನು ಅಮಾನತು ಮಾಡಿದೆ. ಈ ರೀತಿಯ ಗೊಡ್ಡು ಬೆದರಿಕೆಗಳಿಗೆ ಎದೆಗುಂದುವುದಿಲ್ಲ ಎಂದು ಸಾ.ರಾ.ಗೋವಿಂದು ಪ್ರತಿಕ್ರಿಯಿಸಿದರು.
ಬಂದ್ಗೆ 300ಕ್ಕೂ ಅಧಿಕ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.ಗಡಿ ಹೋರಾಟ ಸಮಿತಿ ಅಧ್ಯಕ್ಷ ವಾಟಾಳ್ ನಾಗರಾಜ್, ಕನ್ನಡಸೇನೆ ರಾಜ್ಯಾಧ್ಯಕ್ಷ ಕುಮಾರ್, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎನ್.ಮೂರ್ತಿ ಬಂದ್ಗೆ ಸಂಪೂರ್ಣ ಬೆಂಬಲ ನೀಡಿರುವುದಾಗಿ ತಿಳಿಸಿದ್ದಾರೆ.
(ದಟ್ಸ್ಕನ್ನಡ ವಾರ್ತೆ)
ಪೂರಕ
ಓದಿಗೆ
ಕನ್ನಡಪರ
ಹೋರಾಟಗಾರರಿಗೆ
ಡಿಜಿಪಿ
ಎಚ್ಚರಿಕೆ
ಸೂಪರ್
ಸ್ಟಾರ್
ರಜನಿಗೆ
ಸಿಇಟಿ
ಪರೀಕ್ಷೆ
ತಮಿಳುನಾಡಿನಲ್ಲಿ
ಕನ್ನಡ
ಚಾನೆಲ್
ಪ್ರಸಾರ
ಬಂದ್
ಇಂದಿರಾಗಾಂಧಿಗಿಂತ
ಬುದ್ದಿವಂತೆ,
ಬಲೆ
ಐನಾತಿ
ಏ.4ರಂದು
ತಮಿಳು
ಚಿತ್ರೋದ್ಯಮ
ಭಾರೀ
ಪ್ರತಿಭಟನೆ
ರಜನಿ
ಸಹ
ಪ್ರತಿಭಟನೆಯಲ್ಲಿ
ಭಾಗವಹಿಸಬೇಕು