Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಶಾಲೆಗೆ ರಜನಿಕಾಂತ್ ರು.25 ಲಕ್ಷ ಕೊಡುಗೆ
ಕನ್ನಡ ಶಾಲೆಗಳನ್ನು ಸರಕಾರವೇ ಮುಚ್ಚುತ್ತಿರುವ ಆತಂಕಕಾರಿ ಬೆಳವಣಿಗೆಯ ನಡುವೆ ಒಂದು ನಿರಾತಂಕ ಸುದ್ದಿಯೊಂದು ತೇಲಿಬಂದಿದೆ. ಬೆಂಗಳೂರು ಗವಿಪುರಂನ ಸರ್ಕಾರಿ ಮಾದರಿ ಕನ್ನಡ ಶಾಲೆ ಇನ್ನೇನು ಮುಚ್ಚುವ ಹಂತ ತಲುಪಿತ್ತು. ಈಗ ಆ ಶಾಲೆಗೆ ಸೂಪರ್ ಸ್ಟಾರ್ ರಜನಿಕಾಂತ್ ರು.25 ಲಕ್ಷ ಕೊಡುಗೆ ನೀಡಲು ಮುಂದಾಗಿದ್ದಾರೆ.
ಈ ಶಾಲೆಗೆ ನೂರು ವರ್ಷಗಳ ಇತಿಹಾಸವಿದೆ. ವಿಶೇಷ ಎಂದರೆ ಈ ಶಾಲೆಯಲ್ಲೇ ರಜನಿಕಾಂತ್ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿದ್ದರು. ಆದರೆ ಈ ಶಾಲೆಗೆ ಮೂಲ ಸೌಲಭ್ಯಗಳಿಲ್ಲದೆ ಬಾಗಿಲು ಮುಚ್ಚುವ ಹಂತ ತಲುಪಿದೆ. ಈ ಪಾಠಶಾಲೆಯನ್ನು ಅಭಿವೃದ್ಧಿ ಮಾಡಲು ರಜನಿ ಅಭಿಮಾನಿಗಳು ಕೈಜೋಡಿಸಬೇಕು ಎಂದು ಕರ್ನಾಕಟ ರಾಜ್ಯ ರಜನಿಜೀ ಸೇವಾ ಸಮಿತಿ ಮನವಿ ಮಾಡಿಕೊಂಡಿತ್ತು.
ನೂರು ವರ್ಷಗಳ ಇತಿಹಾಸವಿರುವ ಈ ಶಾಲೆಯನ್ನು ಸರ್ಕಾರ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಅಧ್ಯಕ್ಷ ಜಿ ಮುರುಗನ್ ಮನವಿ ಮಾಡಿದ್ದರು. 2009-10ರಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ನಿಧಿ ಬಿಡುಗಡೆಯಾಗಿದ್ದರೂ ಶಾಲಾ ಕಟ್ಟಡದ ಕಾಮಗಾರಿ ಮಾತ್ರ ಇನ್ನೂ ಆರಂಭವಾಗದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದಿದ್ದಾರೆ ಮುರುಗನ್.
ಶಿಥಿಲಾವಸ್ಥೆಯಲ್ಲಿರುವ ಈ ಶಾಲೆಯ ಕೊಠಡಿಗಳು ವಿದ್ಯಾರ್ಥಿಗಳು ಕುಳಿತುಕೊಳ್ಳಲಾಗದಂತಹ ಸ್ಥಿತಿಯಲ್ಲಿವೆ. ರಜನಿಕಾಂತ್ ಈ ಶಾಲೆಯಲ್ಲಿ ಓದಿದ ಕಾರಣ ಈ ಶಾಲೆಗೆ ಒಂದು ಗೌರವ, ಘನತೆ ಬಂದಿತ್ತು. ಈ ಶಾಲೆಯನ್ನು ಅಭಿವೃದ್ಧಿ ಮಾಡಬೇಕು ಎಂದು ಅವರು ಕರೆಕೊಟ್ಟಿದ್ದರು. ಶಾಲೆಯ ಅಭಿವೃದ್ಧಿಗೆ ಈಗ ಸ್ವತಃ ರಜನಿಕಾಂತ್ ಅವರೇ ಮುಂದಾಗಿರುವುದು ಅವರ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. (ಒನ್ಇಂಡಿಯಾ ಕನ್ನಡ)