Don't Miss!
- News
Breaking; ಮುಂಬೈಗೆ ಬಂದ ರೆಬಲ್ ಶಾಸಕರು, ಸಿಎಂ & ಡಿಸಿಎಂ ಜೊತೆ ಸಭೆ
- Lifestyle
Today Rashi Bhavishya: ಭಾನುವಾರದ ದಿನ ಭವಿಷ್ಯ: ಕನ್ಯಾ, ಮಕರ, ಮೀನ ರಾಶಿಯವರು ಆರೋಗ್ಯದ ವಿಚಾರದಲ್ಲಿ ತುಂಬಾ ಜಾಗರೂಕರಾಗಿರಬೇಕು
- Sports
ಅಲ್ಪಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್; ಬೌಲಿಂಗ್, ಬ್ಯಾಟಿಂಗ್ನಲ್ಲೂ ಮಿಂಚಿದ ಬುಮ್ರಾ
- Finance
1 ಲಕ್ಷ ಕೋಟಿ ರೂ.ಗಳ ಚಿನ್ನ ಸಾಲದ ಮೊತ್ತ ದಾಟಿದ ಕೆನರಾ ಬ್ಯಾಂಕ್
- Automobiles
ಭಾರತದಲ್ಲಿ ಕಾರು ಬಿಡುಗಡೆಯ ಯೋಜನೆಯನ್ನು ಕೈಬಿಟ್ಟ ಗ್ರೇಟ್ ವಾಲ್ ಮೋಟಾರ್ಸ್
- Technology
ಬಜೆಟ್ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್ವಾಚ್ಗಳು!
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಕನ್ನಡ ಶಾಲೆಗೆ ರಜನಿಕಾಂತ್ ರು.25 ಲಕ್ಷ ಕೊಡುಗೆ
ಕನ್ನಡ ಶಾಲೆಗಳನ್ನು ಸರಕಾರವೇ ಮುಚ್ಚುತ್ತಿರುವ ಆತಂಕಕಾರಿ ಬೆಳವಣಿಗೆಯ ನಡುವೆ ಒಂದು ನಿರಾತಂಕ ಸುದ್ದಿಯೊಂದು ತೇಲಿಬಂದಿದೆ. ಬೆಂಗಳೂರು ಗವಿಪುರಂನ ಸರ್ಕಾರಿ ಮಾದರಿ ಕನ್ನಡ ಶಾಲೆ ಇನ್ನೇನು ಮುಚ್ಚುವ ಹಂತ ತಲುಪಿತ್ತು. ಈಗ ಆ ಶಾಲೆಗೆ ಸೂಪರ್ ಸ್ಟಾರ್ ರಜನಿಕಾಂತ್ ರು.25 ಲಕ್ಷ ಕೊಡುಗೆ ನೀಡಲು ಮುಂದಾಗಿದ್ದಾರೆ.
ಈ ಶಾಲೆಗೆ ನೂರು ವರ್ಷಗಳ ಇತಿಹಾಸವಿದೆ. ವಿಶೇಷ ಎಂದರೆ ಈ ಶಾಲೆಯಲ್ಲೇ ರಜನಿಕಾಂತ್ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿದ್ದರು. ಆದರೆ ಈ ಶಾಲೆಗೆ ಮೂಲ ಸೌಲಭ್ಯಗಳಿಲ್ಲದೆ ಬಾಗಿಲು ಮುಚ್ಚುವ ಹಂತ ತಲುಪಿದೆ. ಈ ಪಾಠಶಾಲೆಯನ್ನು ಅಭಿವೃದ್ಧಿ ಮಾಡಲು ರಜನಿ ಅಭಿಮಾನಿಗಳು ಕೈಜೋಡಿಸಬೇಕು ಎಂದು ಕರ್ನಾಕಟ ರಾಜ್ಯ ರಜನಿಜೀ ಸೇವಾ ಸಮಿತಿ ಮನವಿ ಮಾಡಿಕೊಂಡಿತ್ತು.
ನೂರು ವರ್ಷಗಳ ಇತಿಹಾಸವಿರುವ ಈ ಶಾಲೆಯನ್ನು ಸರ್ಕಾರ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಅಧ್ಯಕ್ಷ ಜಿ ಮುರುಗನ್ ಮನವಿ ಮಾಡಿದ್ದರು. 2009-10ರಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ನಿಧಿ ಬಿಡುಗಡೆಯಾಗಿದ್ದರೂ ಶಾಲಾ ಕಟ್ಟಡದ ಕಾಮಗಾರಿ ಮಾತ್ರ ಇನ್ನೂ ಆರಂಭವಾಗದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದಿದ್ದಾರೆ ಮುರುಗನ್.
ಶಿಥಿಲಾವಸ್ಥೆಯಲ್ಲಿರುವ ಈ ಶಾಲೆಯ ಕೊಠಡಿಗಳು ವಿದ್ಯಾರ್ಥಿಗಳು ಕುಳಿತುಕೊಳ್ಳಲಾಗದಂತಹ ಸ್ಥಿತಿಯಲ್ಲಿವೆ. ರಜನಿಕಾಂತ್ ಈ ಶಾಲೆಯಲ್ಲಿ ಓದಿದ ಕಾರಣ ಈ ಶಾಲೆಗೆ ಒಂದು ಗೌರವ, ಘನತೆ ಬಂದಿತ್ತು. ಈ ಶಾಲೆಯನ್ನು ಅಭಿವೃದ್ಧಿ ಮಾಡಬೇಕು ಎಂದು ಅವರು ಕರೆಕೊಟ್ಟಿದ್ದರು. ಶಾಲೆಯ ಅಭಿವೃದ್ಧಿಗೆ ಈಗ ಸ್ವತಃ ರಜನಿಕಾಂತ್ ಅವರೇ ಮುಂದಾಗಿರುವುದು ಅವರ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. (ಒನ್ಇಂಡಿಯಾ ಕನ್ನಡ)