Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡೆಡ್ಲಿ 2' ರಲ್ಲಿ ಹಿರಿಯ ನ್ಯಾಯವಾದಿ ಎಂಟಿ ನಾಣಯ್ಯ
ರವಿ ಶ್ರೀವತ್ಸ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ 'ಡೆಡ್ಲಿ 2' ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ನಗರದ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಕಲಾ ನಿರ್ದೇಶಕ ಆನಂದ್ ಅವರು ನಿರ್ಮಿಸಿದ ವಿಶೇಷವಾದ ಕೋರ್ಟ್ ಸೆಟ್ನಲ್ಲಿ ಫೆ.26 ಹಾಗೂ 27 ರಂದು ಕ್ಲೈಮ್ಯಾಕ್ಸ್ ಸನ್ನಿವೇಶವನ್ನು ಚಿತ್ರೀಕರಿಸಿಕೊಳ್ಳಲಾಯಿತು.
ಎಸಿಪಿ ಪಾತ್ರಧಾರಿ ದೇವರಾಜ್, ಸೋಮನತಾಯಿ ಪಾತ್ರಧಾರಿ ಸುಹಾಸಿನಿ ಹಾಗೂ ರವಿಕಾಳೆ ಈ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಒಟ್ಟು 6 ದಿನಗಳ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ಮೈಸೂರಿನಲ್ಲಿ ಈಗಾಗಲೇ 4 ದಿನ ನಡೆದಿದ್ದು, ಕಂಠೀರವಸ್ಟುಡಿಯೋದಲ್ಲಿ 2 ದಿನ ನಡೆಯಿತು. ಛಾಯಾಗ್ರಾಹಕ ಮ್ಯಾಥ್ಯೂ ರಾಜನ್ ಮೇಲಿನ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.
ಚಿತ್ರೀಕರಣದಲ್ಲಿ ಗಾಯಗೊಂಡಿರುವ ನಾಯಕ ನಟ ಆದಿತ್ಯ ಈಗ ಸುಧಾರಿಸಿಕೊಳ್ಳುತ್ತಿದ್ದು, ಅವರು ಬಂದ ನಂತರ ಹಾಡುಗಳು ಹಾಗೂ ಕೆಲವು ಆಕ್ಷನ್ ದೃಷ್ಯಗಳನ್ನು ಚಿತ್ರೀಕರಿಸಲಾಗುವುದೆಂದು ನಿರ್ಮಾಪಕ ಎಂ. ಮಂಜುನಾಥ್ ತಿಳಿಸಿದ್ದಾರೆ. ಕೆಕೆ ಫಿಲಂಸ್ ಲಾಂಛನದಲ್ಲಿ ಜಿಎನ್ ಮೂರ್ತಿ ಅರ್ಪಿಸಿಎಂ ಪುಟ್ಟಸ್ವಾಮಿ ಹಾಗೂ ಕೆವಿ ರಾಜು ಸಹ ನಿರ್ಮಾಪಕರಾಗಿದ್ದಾರೆ.
ಡೆಡ್ಲಿ ಸೋಮ ಸತ್ತ ನಂತರದ ಕಥೆ ಇದು. ಆ ಚಿತ್ರದ ಒಂದು ಸಣ್ಣ ಎಳೆಯನ್ನಿಟ್ಟುಕೊಂಡು ಈ ಚಿತ್ರಕಥೆ ರಚಿಸಿದ್ದೇನೆ ಎಂದು ನಿರ್ದೇಶಕ ರವಿ ಶ್ರೀವತ್ಸ ಹೇಳಿದ್ದಾರೆ. ಕೆಡಿ ವೆಂಕಟೇಶ್ ಸಾಹಸ ಸಂಯೋಜನೆ, ಜೋನಿಹರ್ಷರ ಸಂಗೀತ ಸಂಯೋಜನೆ ಇದೆ.