Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ತಮಿಳಿನ ಸೂಪರ್ ಹಿಟ್ ಚಿತ್ರ ರೇಣಿಗುಂಟ
'ಒಲವೇ ಮಂದಾರ' ಖ್ಯಾತಿಯ ಶ್ರೀಕಾಂತ್ ಚಿತ್ರದ ನಾಯಕ ನಟ. ನಾಯಕಿಯ ಹುಡುಕಾಟ ನಡೆಯುತ್ತಿದೆ. ಹೊಸಬರಾದಂತಹ ಕೀರ್ತನ್ ಜೋಸೆಫ್ (ಡ್ರಮ್ಮರ್ ದೇವ ಪುತ್ರ) ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡ ಪ್ರೇಕ್ಷಕರ ಮನೋಭಾವಕ್ಕೆ ತಕ್ಕಂತೆ ಮೂಲ ಚಿತ್ರವನ್ನು ಯಥಾವತ್ತಾಗಿ ಭಟ್ಟಿ ಇಳಿಸದೆ, ಅಲ್ಪಸ್ವಲ್ಪ ಬದಲಾವಣೆಗಳೊಂದಿಗೆ ಚಿತ್ರವನ್ನು ತೆರೆಗೆ ತರುತ್ತಿರುವುದಾಗಿ ಜೋಸೆಫ್ ತಿಳಿಸಿದ್ದಾರೆ.
ಒಟ್ಟು 60 ದಿನಗಳ ಕಾಲ ಮಂಡ್ಯ, ಕೋಲಾರ, ಹುಬ್ಬಳ್ಳಿ ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆಯಲಿದೆ. ಮೇ 3ರಂದು ಚಿತ್ರದ ಮುಹೂರ್ತ. ಚಿತ್ರದಲ್ಲಿ ನಾಯಕನಿಗೆ ಸಾಥ್ ನೀಡುವ ಜೈಲುವಾಸಿ ಗೆಳೆಯ ತೀಪೆಟ್ಟಿ ಗಣೇಶ್ ಇಲ್ಲಿ 'ಕಡ್ಡಿಪೆಟ್ಟಿಗೆ ಗಣೇಶ್' ಆಗಿ ಕನ್ನಡದಲ್ಲೂ ಅಭಿನಯಿಸುತ್ತಿದ್ದಾರೆ.
ಈ ಚಿತ್ರದಲ್ಲಿ ನಾಯಕಿಗೆ ಮಾತೇ ಬರುವುದಿಲ್ಲ. ಆಕೆಯದು ಮುಗ್ಧ ಮೂಕಿಯ ಪಾತ್ರ. ಆಕೆಯ ಸಹೋದರನೇ ವೇಶ್ಯಾವಾಟಿಕೆಗೆ ತಳ್ಳುವ ಕರುಣಾಜನಕ ಕಥೆಯನ್ನು ಒಳಗೊಂಡಿದೆ. ಮಂಜುನಾಥ್ ಗೌಡ ಹಾಗೂ ವೆಂಕಟೇಶ್ ಗೌಡ ಚಿತ್ರದ ನಿರ್ಮಾಪಕರು. ಸೈಕೋ ಖ್ಯಾತಿಯ ಸಭಾ ಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ. ಚರಣ್ ಮತ್ತು ಜಾಬ್ ಎಂಬಿಬ್ಬರು ಸಂಗೀತಧಾರೆ ಎರೆಯುತ್ತಿದ್ದಾರೆ. (ಏಜೆನ್ಸೀಸ್)