Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಚಿಂಗಾರಿ' ಮೊದಲ ದಿನ ಟಿಕೆಟ್ ಸೋಲ್ಡ್ ಔಟ್
ಸಾರಥಿ ಯಶಸ್ಸನ್ನು ಹೆಗಲ ಮೇಲೆ ಹೊತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಚಿಂಗಾರಿ ಚಿತ್ರಕ್ಕೆ ನಿರೀಕ್ಷೆಯಂತೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಮೊದಲ ದಿನದ ಟಿಕೆಟ್ ಸೋಲ್ಡ್ ಔಟ್ ಆಗಿದ್ದು, ಟಿಕೆಟ್ ಸಿಗದ ಅಭಿಮಾನಿಗಳು ನಿರಾಶೆಯಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಅಪರ್ಣ ಚಿತ್ರಮಂದಿರದ ಮುಂದೆ ನೂರಾರು ಸಂಖ್ಯೆಯಲ್ಲಿ ಸೇರಿರುವ ಅಭಿಮಾನಿಗಳು ಮಾರ್ನಿಂಗ್ ಶೋ ಟಿಕೆಟ್ ಸಿಗದೆ ಪರದಾಡುತ್ತಿದ್ದರು. ಆದರೆ, ಬರೀ ಇದು ಮಾರ್ನಿಂಗ್ ಶೋ ಕಥೆ ಮಾತ್ರವಲ್ಲ. ಮೊದಲ ದಿನದ ಪೂರ್ತಿ ಟಿಕೆಟ್ ಸೋಲ್ಡ್ ಔಟ್ ಎಂದು ತಿಳಿದಾಗ ಅಭಿಮಾನಿಗಳು 'ಟಿಕೇಟ್ ಬೇಕು, ದರ್ಶನ್ ನೋಡ್ಬೇಕು' ಎಂದು ಕೂಗುತ್ತಾ ಥೇಟರ್ ಕಡೆಗೆ ಮುನ್ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಿದ ಪೊಲೀಸರು, ಮುಂದಿನ ಶೋ ಟಿಕೇಟ್ ಕೊಡಿಸುವ ಭರವಸೆ ನೀಡಿದ್ದಾರೆ.
ತುಮಕೂರಿನ ಗಾಯಿತ್ರಿ ಚಿತ್ರಮಂದಿರದ ಕಥೆಯೂ ಇದಕ್ಕಿಂತ ಹೊರತಾಗಿಲ್ಲ. ಥೇಟರ್ ಮಾಲೀಕರು ಹಾಗೂ ಅಭಿಮಾನಿಗಳ ನಡುವೆ ಮಾತಿನ ಜಟಾಪಟಿ ನಡೆದಿದೆ. ರಾಜ್ಯದ ನೂರಕ್ಕೂ ಅಧಿಕ ಚಿತ್ರಮಂದಿರಗಳ ಮುಂದೆ ಇದೇ ಪರಿಸ್ಥಿತಿ ಮುಂದುವರೆದಿದ್ದು, ಬಿರುಗಾಳಿ ಹರ್ಷ ನಿರ್ದೇಶನದ ಚಿಂಗಾರಿ ಹೊಸ ದಾಖಲೆ ಬರೆಯುವ ಲಕ್ಷಣಗಳು ಕಂಡು ಬಂದಿದೆ. ದರ್ಶನ್ ಮತ್ತೊಮ್ಮೆ ಬಾಕ್ಸಾಫೀಸ್ ಸುಲ್ತಾನ್ ಎನಿಸುವ ದಿನ ದೂರವಿಲ್ಲ ಎಂದು ಅಭಿಮಾನಿಗಳ ಉತ್ಸಾಹ ನೋಡಿದರೆ ಹೇಳಬಹುದು.
ಚಿಂಗಾರಿ ಚಿತ್ರದ 'ಚಿತ್ರವಿಮರ್ಶೆ' ಮಧ್ಯಾಹ್ನದ ನಂತರ ನಿರೀಕ್ಷಿಸಿ..