Don't Miss!
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಕುಮಾರ್ ಗೋವಿಂದ್ ತ್ರಿಕೋನ ಪ್ರೇಮಕತೆ
ಸುದೀರ್ಘ ಸಮಯ ಗಾಂಧಿನಗರದಿಂದ ನಾಪತ್ತೆಯಾಗಿದ್ದ ನಟ ಕುಮಾರ್ ಗೋವಿಂದ್ ಈಗ ಮರಳಿಬಂದಿದ್ದಾರೆ. ಈ ಬಾರಿ ಅವರು ನವಿರಾದ ಪ್ರೇಮ ಕತೆಯಲ್ಲಿ ಬೆಂದೆದ್ದಿದ್ದಾರೆ. ಪ್ರೀತಿಸಿ ಹೊರಟವಳ ಹಿಂದೆ ಬಿದ್ದರೆ ಇನ್ನೇನಾಗುತ್ತದೆ! ಅಂದಹಾಗೆ ಇದು ಪ್ರೀತಿಸಿ ಹೊರಟವಳೇ ಚಿತ್ರದ ಕತೆ. ಬಿ.ಕೆ.ಶ್ರೀನಿವಾಸ್ ಅರ್ಪಿಸುವ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ.
ತ್ರಿಕೋನ ಪ್ರೇಮಕಥೆಯ ಈ ಚಿತ್ರದಲ್ಲಿ ನಾಯಕಿ ಮಾಡಿದ ಚಿಕ್ಕ ಸಹಾಯದಿಂದ ನಾಯಕನ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತದೆ ಎಂಬ ಎಳೆಯಿಂದ ಕಥೆ ಸಾಗುತ್ತದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಗೌತಮ್ಶ್ರೀನಿವಾಸ್ ಸಂಗೀತ ನೀಡಿದ್ದಾರೆ. ನಿರ್ದೇಶಕ ಪ್ರೇಮ್, ಅನೂಪ್, ಅನುರಾಧಾಭಟ್, ಮಧುಬಾಲಕೃಷ್ಣ ಹಾಗೂ ಟಿ.ವಿ.ಕೃಷ್ಣ ಚಿತ್ರದ ಗೀತೆಗಳನ್ನು ಹಾಡಿದ್ದಾರೆ.
ನಿರ್ಮಾಪಕ ಬಿ.ಕೆ.ಶ್ರೀನಿವಾಸ್ ಚಿತ್ರದ ಪ್ರಮುಖ ಪಾತ್ರದಲ್ಲಿ ಕಣಿಕೊಂಡಿರುವುದಲ್ಲದೆ, ಒಂದು ಹಾಡನ್ನೂ ಬರೆದಿದ್ದಾರೆ. ಉಳಿದ ಗೀತೆಗಳನ್ನು ಕುಮಾರ್ಗೋವಿಂದ್, ಹರೀಶ್ ಹಾಗೂ ವಿ.ನಾಗೇಂದ್ರಪ್ರಸಾದ್ ಬರೆದಿದ್ದಾರೆ. ರವಿ ಸಂಕಲನವಿರುವ ಈ ಚಿತ್ರಕ್ಕೆ ರಂಗಾ ಅವರ ಛಾಯಾಗ್ರಹಣವಿದೆ. ಕುಮಾರ್ಗೋವಿಂದ್, ಡಿಂಪಲ್, ಪದ್ಮಾವಾಸಂತಿ, ಸುಂದರರಾಜ್, ಬ್ಯಾಂಕ್ಜನಾರ್ದನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಊಟಿ, ಕುಂದಾಪುರ, ನಂದಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರಕ್ಕೆ ಇಪ್ಪತ್ತೇಳು ದಿನಗಳ ಚಿತ್ರೀಕರಣ ನಡೆದಿದೆ. (ದಟ್ಸ್ಕನ್ನಡ ಸಿನಿವಾರ್ತೆ)