Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮೊದಲಸಲ'ಕ್ಕೆ ಭಾಮಾ ನವಿಲಿನ ನಾಟ್ಯ
ಕರ್ನಾಟಕ ಟಾಕೀಸ್ ಲಾಂಛನದಡಿಯಲ್ಲಿ ಯೋಗೀಶ್ನಾರಾಯಣ್ ಹಾಗೂ ಮಲ್ಲಿಕಾರ್ಜುನ್ ಗದಗ ನಿರ್ಮಿಸುತ್ತಿರುವ 'ಮೊದಲಸಲ' ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ಬಿರುಸಿನಿಂದ ಸಾಗಿದೆ. ನವಿಲಿನ ನೃತ್ಯಕ್ಕೆ ಮನಸೋಲದವರು ಯಾರಿದ್ದಾರೇ? ತನ್ನ ಹಾವಭಾವದಿಂದ ಎಂತಹವರನ್ನು ತನ್ನೆಡೆಗೆ ಸೆಳೆಯುವ ಅದ್ಬುತ ಶಕ್ತಿ ಇದೆ ಅದಕ್ಕೆ. ನಾಯಕಿ ಭಾಮ ಅವರಿಗೂ ನವಿಲು ಅಂದರೆ ಪ್ರಾಣವಂತೆ.
ಅಷ್ಟೇ ಅಲ್ಲ. ಅದರೊಂದಿಗೆ ನರ್ತಿಸುವ ಹಂಬಲವೂ ಇದೆಯಂತೆ. ಹೀಗೆ ತಮಗಿರುವ ಆಸೆಗಳನ್ನು ನಾಯಕಿ ನಾಗೇಂದ್ರ ಪ್ರಸಾದ್ ಅವರು ಬರೆದಿರುವ 'ನವಿಲೆ ನವಿಲೆ ನನ್ನ ಜೊತೆ ಕುಣಿಯೇ ನೀನು-ನಿನ್ನ ಸಹಚಾರಿ ನಾನು ಹಾಡಿನ ಮೂಲಕ ಹೇಳಿಕೊಂಡರು. ನಾಯಕಿಯ ಭಾವನೆಗಳು ವ್ಯಕ್ತವಾಗುವ ಈ ಗೀತೆಗಾಗಿ ನಿರ್ದೇಶಕರು ಮಂಜಿನೂರಿಗೆ ಕೃತಕ ಮಳೆಯನ್ನು ತರಿಸಿದ್ದರು. ಚಿತ್ರದಲ್ಲಿ ನಾಯಕಿಯನ್ನು ಪರಿಚಯಿಸುವ ಈ ಗೀತೆಗೆ ಮದನ್ಹರಿಣಿ ನೃತ್ಯ ಸಂಯೋಜಿಸಿದ್ದಾರೆ. ಮಡಿಕೇರಿಯಲ್ಲಿ ಚಿತ್ರೀಕರಣ ಸಂಪೂರ್ಣಗೊಂಡ ನಂತರ ಚಿತ್ರತಂಡದ ಪಯಣ ಕಾಸರಗೋಡಿನತ್ತ ಸಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಮಹೇಂದರ್ ಅವರ ಬಳಿ ಸಹಾಯಕರಾಗಿದ್ದ ಪುರುಷೋತ್ತಮ್ ಈ ಚಿತ್ರದ ನಿರ್ದೇಶಕರು. ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವೆಂಕಟೇಶ್, ಜಗದೀಶ್ ಕಾಳಗಿ, ಮಯೂರ್ ಮತ್ತು ಶ್ರೀಧರ್ ಪಟೇಲ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣರ ಸಂಗೀತವಿದೆ. ಎಚ್.ಸಿ.ವೇಣು ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ರವಿವರ್ಮ ಸಾಹಸ, ದಿನೇಶ್ ಮಂಗಳೂರು ಕಲೆ ಹಾಗೂ ಶಶಿಧರ್ ಅವರ ನಿರ್ಮಾಣ ನಿರ್ವಹಣೆಯಿದೆ. ಚಿತ್ರದ ತಾರಾಬಳಗದಲ್ಲಿ ಯಶ್, ಭಾಮಾ, ರಂಗಾಯಣ ರಘು, ಅವಿನಾಶ್, ಶರಣ್, ವಿನಯಾಪ್ರಸಾದ್, ಯೋಗೀಶ್ನಾರಾಯಣ್, ಮೈಸೂರು ದಯಾನಂದ್ ರಾಕೇಶ್, ಮಂಜು, ತಿಮ್ಮೇಗೌಡ ಮುತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)