Don't Miss!
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಲೋಕಸಭೆಯಿಂದ ನಟಿ ರಮ್ಯಾ ಸ್ಪರ್ಧೆ?
ನಟಿ ರಮ್ಯಾ ಅವರ ತಾಯಿ ರಂಜಿತಾ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರನ್ನು ಭೇಟಿ ಮಾಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುವ ತಮ್ಮ ಆಸೆಯನ್ನು ದೇಶಪಾಂಡೆ ಅವರೊಂದಿಗೆ ತೋಡಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ರಂಜಿತಾ ಅವರಿಗೆ ಬದಲಾಗಿ ಅವರ ಮಗಳು ರಮ್ಯಾರನ್ನು ಕಣಕ್ಕಿಳಿಸಿದರೆ ಹೇಗೆ ಎಂದು ಲೆಕ್ಕಾಚಾರ ಹಾಕಿದ್ದಾರೆ. ಈ ವಿಚಾರವನ್ನು ಶೀಘ್ರದಲ್ಲೇ ಕಾಂಗ್ರೆಸ್ ಹೈಕಮಾಂಡ್ ಕಿವಿಗೆ ಹಾಕಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಚುನಾವಣೆಗೆ ಸ್ಪರ್ಧಿಸಿ ಎಂದು ತಮ್ಮನ್ನು ಯಾರೂ ಇನ್ನೂ ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಿಸಿದರೆ ಯೋಚಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಜನಸೇವೆ ಮಾಡಬೇಕು ಎಂಬ ಆಸೆ ನನಗೂ ಇದೆ. ಅದರಲ್ಲೂ ಮಂಡ್ಯಜನರೊಂದಿಗೆ ಬೆರೆಯಬೇಕು, ಅವರ ಸೇವೆ ಮಾಡಬೇಕು ಎಂಬ ಹಂಬಲವೂ ಇದೆ ಎಂದು ರಮ್ಯಾ ಹೇಳಿದ್ದಾರೆ. ನಮ್ಮ ತಾಯಿ ಕಾಂಗ್ರೆಸ್ ನ ಹಿರಿಯ ಕಾರ್ಯಕರ್ತೆ. ಅವರಿಗೆ ಒಂದು ವೇಳೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದರೆ ತಾವು ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಟಿಕೆಟ್ ಪೀಕಲಾಟದಲ್ಲಿ ಮಂಡ್ಯ ಜನ ಹೈರಾಣಾಗಿದ್ದಾರೆ. ರಮ್ಯಾ ಅವರಿಗಾದರೂ ಕಾಂಗ್ರೆಸ್ ಟಿಕೆಟ್ ಸಿಗಲಿ ಎಂದು ಬಯಸೋಣವೇ!?
(ದಟ್ಸ್ ಕನ್ನಡ ಚಿತ್ರವಾರ್ತೆ)
ಲೋಕಸಭೆ
ಚುನಾವಣೆಗೆ
ತಾರೆಗಳ
ಸಮರ
ಬಳ್ಳಾರಿ
ರೆಡ್ಡಿಗಳ
ವಿರುದ್ಧ
ನಟ
ಸುದೀಪ್
ಸ್ಪರ್ಧೆ!?
ತುಮಕೂರಿನಿಂದ
ನಟ
ಅಶೋಕ್
ಲೋಕಸಭೆಗೆ