Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿತೆರೆಗೆ ನರ್ಸ್ ಜಯಲಕ್ಷ್ಮಿ ಜೀವನ ಕತೆ
ನರ್ಸ್ ಜಯಲಕ್ಷ್ಮಿ ಜೀವನದ ಘಟನೆ ಆಧಾರಿತ ಕನ್ನಡ ಚಲನಚಿತ್ರವೊಂದು ಶೀಘ್ರದಲ್ಲೇ ಸೆಟ್ಟೇರಲಿದೆ. ಈ ಚಿತ್ರವನ್ನು ಠಾಣ್ಗೆ ಕ್ರಿಯೇಷನ್ಸ್ ನಿರ್ಮಿಸಲಿದ್ದು 16ಗಂಟೆಗಳ ದಾಖಲೆ ಸಮಯದಲ್ಲಿ ಚಿತ್ರೀಕರಣ ನಡೆಸಲು ಉದ್ದೇಶಿಸಲಾಗಿದೆ. ಚಿತ್ರಕ್ಕೆ 'ಚಕ್ರವ್ಯೂಹ' ಎಂದು ಹೆಸರಿಡಲಾಗಿದೆ ಎಂದು ಚಿತ್ರದ ನಿರ್ದೇಶಕ ಟಿಕೆ ಜಯರಾಮ್ ತಿಳಿಸಿದ್ದಾರೆ.
ಮಾರ್ಚ್ 16ರ ಯುಗಾದಿ ಹಬ್ಬದ ದಿನದಂದು 'ಚಕ್ರವ್ಯೂಹ' ಚಿತ್ರದ ಧ್ವನಿಸುರುಳಿಗಳು ಬಿಡುಗಡೆಯಾಗಲಿವೆ. ಏಪ್ರಿಲ್ ತಿಂಗಳಿಂದ ಚಕ್ರವ್ಯೂಹ ಚಿತ್ರೀಕರಣ ನಡೆಯಲಿದೆ. ಚಿತ್ರದ ಪಾತ್ರವರ್ಗದಲ್ಲಿ ಯಾರು ನಟಿಸಲಿದ್ದಾರೆ ಎಂಬ ಬಗ್ಗೆ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.
ಕನ್ನಡದ ಇಬ್ಬರು ಖ್ಯಾತ ನಟರು ಚಿತ್ರದಲ್ಲಿ ನಟಿಸಲಿದ್ದು ನಾಯಕಿಯಾಗಿ ಟಿವಿ ವರದಿಗಾರ್ತಿಯೊಬ್ಬರು ಕಾಣಿಸಲಿದ್ದಾರೆ. ಚಿತ್ರಕ್ಕೆ ಎಸ್ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣವಿರುತ್ತದೆ. ಉಳಿದತಾಂತ್ರಿಕ ವರ್ಗ ಹಾಗೂ ಪಾತ್ರಗಳ ಬಗ್ಗೆ ಶೀರ್ಘದಲ್ಲೆ ತಿಳಿಸಲಾಗುತ್ತದೆ ಎಂದು ಚಿತ್ರದ ನಿರ್ಮಾಪಕ ಮನೋಜ್ ಕುಮಾರ್ ಠಾಣ್ಗೆ ವಿವರ ನೀಡಿದರು.
ಈ ಹಿಂದೆ ಅಂಬರೀಶ್ ಮತ್ತು ಅಂಬಿಕಾ ಅಭಿನಯದ 'ಚಕ್ರವ್ಯೂಹ' ಹೆಸರಿನ ಚಿತ್ರ ತೆರೆಕಂಡಿತ್ತು. ಎನ್ ವೀರಸ್ವಾಮಿ ನಿರ್ಮಿಸಿದ್ದ ಚಿತ್ರವನ್ನು ವಿ ಸೋಮಶೇಖರ್ ನಿರ್ದೇಶಿಸಿದ್ದರು. ಪೋಷಕ ವರ್ಗದಲ್ಲಿ ವಜ್ರಮುನಿ, ಪ್ರಭಾಕರ್ ಮತ್ತು ರವಿಚಂದ್ರನ್ ನಟಿಸಿದ್ದರು. ಇಪ್ಪತ್ತೇಳು ವರ್ಷಗಳ ಬಳಿಕ ಇದೀಗ ಮತ್ತೆ 'ಚಕ್ರವ್ಯೂಹ' ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರುತ್ತಿದೆ.