Don't Miss!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಥಿಯೇಟರ್ ಮುಂದೆ ಬಲೂನಿನಲ್ಲಿ ದಿಗಂತ್ ಹಾರಾಟ
ನಿರ್ದೇಶಕ ಇಂದ್ರಜಿತ್ ಲಂಕೇಶ್ ತಮ್ಮ ಚಿತ್ರ 'ದೇವ್ ಸನ್ ಆಫ್ ಮುದ್ದೇಗೌಡ' ಚಿತ್ರದ ಪ್ರಚಾರ ಕಾರ್ಯವನ್ನು ವಿನೂತನ ರೀತಿಯಲ್ಲಿ ಮಾಡಲು ನಿರ್ಧರಿಸಿದ್ದಾರೆ. ಅದರಲ್ಲೊಂದು, ಮಂಡ್ಯದಲ್ಲಿ ಪ್ರಮೋಶನ್ ಹೆಸರಿನಲ್ಲಿ ದೊಡ್ಡ ಮುದ್ದೆಯೊಂದನ್ನು ಲೋಕಾರ್ಪಣೆ ಮಾಡುವುದು. ಸ್ಥಳೀಯ ಸಂಘಸಂಸ್ಥೆಗಳ ನೆರವಿನಿಂದ ಪೌಷ್ಠಿಕ ಸತ್ವಗಳಿರುವ ಮುದ್ದೆಯನ್ನು ತಯಾರಿಸಿ ಅದನ್ನು ನಂತರ ಬಡಮಕ್ಕಳಿಗೆ ಹಂಚುವುದು.
ಇದಲ್ಲದೇ ಇನ್ನೊಂದು ಪ್ರಯೋಗಕ್ಕೂ ಇಂದ್ರಜಿತ್ ಮುಂದಾಗಿದ್ದಾರೆ. ಮಾಮೂಲಿ ವುಡನ್ ಕಟೌಟ್ ನಿಲ್ಲಿಸುವ ಬದಲು, ಒಂದು ಕಡೆ ದಿಗಂತ್ ಫೋಟೋ ಹಾಗೂ ಇನ್ನೊಂದು ಕಡೆ ಚಿತ್ರದ ಶೀರ್ಷಿಕೆ ಇರುವ ಬಲೂನ್ ಒಂದನ್ನು ಬಿಡುಗಡೆಯಾದ ಚಿತ್ರಮಂದಿರಗಳ ಮುಂದೆ ಹಾರಿಬಿಡಲು ನಿರ್ಧರಿಸಿದ್ದಾರೆ. ಇದು ಮಾಮೂಲಿ ಕಟೌಟ್ ನಿಲ್ಲಿಸುವುದಕ್ಕಿಂತ ಜಾಸ್ತಿ ದುಬಾರಿ.
ಆದರೆ ಇಂದ್ರಜಿತ್ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹೊಸದನ್ನು ಮಾಡುವ ಪ್ರಯತ್ನವಷ್ಟೇ ತಮ್ಮದು ಎಂದು ಈ ಮೂಲಕ ತೋರಿಸಲಿದ್ದಾರಂತೆ. ಅಂದಹಾಗೆ, ಈ ಚಿತ್ರ ಇದೇ ತಿಂಗಳು, ಏಪ್ರಿಲ್ 6, 2012 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಯೂ ಟ್ಯೂಬ್ ನಲ್ಲಿ ಅದಕ್ಕೂ ಮೊದಲೇ ಭಾರತ ಹೊರತುಪಡಿಸಿ ಮಿಕ್ಕ ಕಡೆ ಸಿನಿಮಾ ಪ್ರೀಮಿಯರ್ ಶೋ ಲಭ್ಯವಿದೆ. (ಒನ್ ಇಂಡಿಯಾ ಕನ್ನಡ)