Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಲಿಕಾಫ್ಟರ್ ನಲ್ಲಿ ಜಗ್ಗೇಶ್ 'ಲಿಫ್ಟ್ ಕೋಡ್ಲಾ'
ಒಂದು ತಂಡದ ನಾಯಕ ಹಾಗೂ ಆತನ ಸಹಚರರು ಸಾಯುವುದಕ್ಕಾಗಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೊರಟಿದ್ದಾರೆ ಎಂಬ ಅನುಮಾನ ಪೊಲೀಸ್ನವರಿಗೆ. ಈ ತಂಡದ ಸದಸ್ಯರನ್ನು ಪತ್ತೆ ಮಾಡಿ ಅವರನ್ನು ಪಾರು ಮಾಡಲು ವಿಶೇಷ ಅಧಿಕಾರಿಯ ನೇಮಕ ಆಗುತ್ತದೆ. ರಸ್ತೆಮಾರ್ಗ ಬಳಸಿ ಎಷ್ಟು ಹುಡಕಿದ್ದರೂ ಸಿಕ್ಕದ ಈ ತಂಡದವರ ಅನ್ವೇಷಣೆಗಾಗಿ ವಿಶೇಷ ಅಧಿಕಾರಿ ಹೆಲಿಕಾಪ್ಟರ್ ಬಳಸುತ್ತಾರೆ.
ಚಿಕ್ಕಮಗಳೂರಿನ ಬೆಟ್ಟ, ಕಾಡುಗಳನ್ನು ಸುತ್ತು ಹಾಕುತ್ತಾರೆ. ಈ ಸನ್ನಿವೇಶವನ್ನು 'ಲಿಫ್ಟ್ ಕೊಡ್ಲಾ' ಚಿತ್ರಕ್ಕಾಗಿ ನಿರ್ದೇಶಕ ಅಶೋಕ್ ಕಶ್ಯಪ್ ಚಿತ್ರೀಕರಿಸಿಕೊಂಡರು. ನಾಯಕನ ಪಾತ್ರದಲ್ಲಿ ಜಗ್ಗೇಶ್ ಹಾಗೂ ವಿಶೇಷ ಅಧಿಕಾರಿಯ ಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದರು. ಸಿಎಂಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ ಎಂ ಆರ್ ಶಂಕರ್ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಶೋಕ್ಕಶ್ಯಪ್ ಅವರ ಛಾಯಾಗ್ರಹಣವಿದೆ.
ವಿ.ಮನೋಹರ್ ಸಂಗೀತ, ರಾಂನಾರಾಯಣ್ ಸಂಭಾಷಣೆ ಬರೆದಿರುವ ಚಿತ್ರದ ತಾರಾಬಳಗದಲ್ಲಿ ಜಗ್ಗೇಶ್, ಕೋಮಲ್, ಶಶಿಕುಮಾರ್, ಅರ್ಚನಾಗುಪ್ತಾ, ಸುದರ್ಶನ್, ರಾಜುತಾಳಿಕೋಟೆ, ಕಿಲ್ಲರ್ವೆಂಕಟೇಶ್, ಕಿಶೋರ್, ಶೋಭ್ರಾಜ್, ವಿ.ಮನೋಹರ್, ಬುಲೆಟ್ಪ್ರಕಾಶ್, ಸಾಧುಕೋಕಿಲಾ, ಬ್ಯಾಂಕ್ ಜನಾರ್ದನ್ ಮುಂತಾದವರಿದ್ದಾರೆ. ಸಚಿವ ಕಟ್ಟಾಸುಬ್ರಹ್ಮಣ್ಯನಾಯ್ಡು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.