Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಾಮಿ ನಿತ್ಯಾನಂದನಿಗೆ ಜೂಹಿ ಚಾವ್ಲಾ ಪಾದಪೂಜೆ
ರಾಸಲೀಲೆ ಖ್ಯಾತಿಯ ಸ್ವಾಮಿ ನಿತ್ಯಾನಂದ ಬಿಡದಿ ಆಶ್ರಮದಲ್ಲಿ ಜನವರಿ 1ರಂದು ತಮ್ಮ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ನಿತ್ಯಾನಂದನ ಹುಟ್ಟುಹಬ್ಬಕ್ಕೆ ಬಾಲಿವುಡ್ ತಾರೆ ಜೂಹಿ ಚಾವ್ಲಾ ಶನಿವಾರ (ಜ.1) ಆಶ್ರಮಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಡಿಸೆಂಬರ್ 28ರಂದು ಭೇಟಿ ನೀಡಿದ ಆಕೆ ಬಿಡದಿ ಆಶ್ರಮದಲ್ಲಿ ನಾಲ್ಕು ದಿನಗಳ ಕಾಲ ಉಳಿದುಕೊಂಡಿದ್ದರು.
ಜೂಹಿ ಚಾವ್ಲಾ ಅವರು ಸ್ವಾಮಿ ನಿತ್ಯಾನಂದ ಅವರ ಪರಮ ಭಕ್ತೆ. ಒಮ್ಮೆ ಆಕೆಯ ಸಹೋದರನೊಬ್ಬ ಕೋಮಾ ಹಂತದಲ್ಲಿದ್ದ ಸಮಯದಲ್ಲಿ ಜೂಹಿ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ನಿತ್ಯಾನಂದ ಆಶೀರ್ವಾದ ಪಡೆದಿದ್ದರು. ಬಳಿಕ ಆಕೆಯ ಸಹೋದರ ಗುಣಮುಖನಾಗಿದ್ದನಂತೆ. ಹಾಗಾಗಿ ಬಿಡದಿ ಆಶ್ರಮಕ್ಕೂ ಜೂಹಿ ಚಾವ್ಲಾ ಅವರಿಗೂ ಅವಿನಾಭಾವ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ.
ಜೂಹಿ ಚಾವ್ಲಾ ಕುಟುಂಬ ಸಮೇತ ಬಿಡದಿ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮೀಜಿಗೆ ಹುಟ್ಟು ಹಬ್ದದ ಶುಭಾಶಯ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ನಿತ್ಯಾನಂದನ ಹುಟ್ಟುಹಬ್ಬದ ಪ್ರಯುಕ್ತ ಜ.1ರ ಬೆಳಿಗ್ಗೆ ಮೆರವಣಿಗೆ ಮೂಲಕ ಆಶ್ರಮಕ್ಕೆ ಕರೆ ತಂದು ಪಾದಪೂಜೆ ನಡೆಸಲಾಯಿತು. ಜೂಹಿ ಚಾವ್ಲಾ ಕುಟುಂಬ ಕೂಡ ಪಾದಪೂಜೆ ನಡೆಸಿ ಆಶೀರ್ವಾದ ಪಡೆದಿರುವುದಾಗಿ ಮೂಲಗಳು ತಿಳಿಸಿವೆ.
ಸ್ವಾಮಿಗಳ ಹುಟ್ಟುಹಬ್ಬಕ್ಕೆ ರಾಜಕೀಯ ಧುರೀಣರು, ವಿದೇಶಿ ಭಕ್ತರು ಸೇರಿದಂತೆ ಹಲವಾರು ಮಂದಿ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ನಿತ್ಯಾನಂದ ಭವನಕ್ಕೆ ಕೊಳದ ಮಠದ ಶಾಂತವೀರ ಸ್ವಾಮೀಜಿ ಶಂಕು ಸ್ಥಾಪನೆ ನೆರವೇರಿಸಿದರು. ನಟಿ ರಂಜಿತಾ ಸಹ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ನಿತ್ಯಾನಂದ ಪಾದಪೂಜೆ ನಡೆಸಿದರು ಎಂದು ಆಶ್ರಮದ ಮೂಲಗಳು ತಿಳಿಸಿವೆ.
ಕಳೆದ ಎರಡು ವರ್ಷಗಳಿಂದ ಆನಂದೋತ್ಸವ ಹೆಸರಿನಲ್ಲಿ ಸ್ವಾಮಿ ನಿತ್ಯಾನಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಹಲವಾರು ಪ್ರದೇಶಗಳಿಂದ ಗಣ್ಯರು ಆಗಮಿಸುತ್ತಿದ್ದರು. ಆದರೆ ಈ ಬಾರಿಯ ಆನಂದೋತ್ಸವದಲ್ಲಿ ಸಿನಿಮಾ ತಾರೆಗಳು, ರಾಜಕೀಯ ಧುರೀಣರು ಅಷ್ಟಾಗಿ ಕಂಡುಬಂದಿಲ್ಲ. [ರಂಜಿತಾ]