Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾರ್ವತಮ್ಮ ರಾಜ್ ಕುಮಾರ್ ಗೆ ಚೆನ್ನಮ್ಮ ಪ್ರಶಸ್ತಿ
ಪಾರ್ವತಮ್ಮ ರಾಜ್ ಕುಮಾರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅನೇಕರಿಗೆ 'ವೀರರಾಣಿ ಕಿತ್ತೂರು ಚೆನ್ನಮ್ಮ' ಪ್ರಶಸ್ತಿ ನೀಡಲು ಸರಕಾರ ಮುಂದಾಗಿದೆ. ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಜುಲೈ 8ರಂದು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಪಿ ಎಂ ನರೇಂದ್ರಸ್ವಾಮಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನದಂದು ನೀಡುವುದು ಸಂಪ್ರದಾಯ. ಆದರೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಪ್ರಶಸ್ತಿಪ್ರದಾನ ಸಮಾರಂಭವನ್ನು ಮುಂದೂಡಲಾಗಿತ್ತು ಎಂದು ಹೇಳಿದರು.
ಏತನ್ಮಧ್ಯೆ 'ಕಿತ್ತೂರು ರಾಣಿ ಚೆನ್ನಮ್ಮ' ಪ್ರಶಸ್ತಿಯ ನಗದು ಬಹುಮಾನವನ್ನು ಅವಧಿ ಮುಗಿದ ಡಿಡಿ ರೂಪದಲ್ಲಿ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ನೀಡಿತ್ತು. ಈ ಘಟನೆಯಿಂದ ಕರ್ನಾಟಕ ಸರಕಾರಕ್ಕೆ ಮುಖಭಂಗವಾಗಿತ್ತು. ಪಾರ್ವತಮ್ಮ ಕಸಿವಿಸಿಗೊಂಡಿದ್ದರು. ಇದರಿಂದ ನೊಂದ ಪಾರ್ವತಮ್ಮ ಸರಕಾರ ನಡೆಸುವ ಯಾವುದೇ ಸಭೆ ಸಮಾರಂಭಗಳಿಗೆ ಇನ್ನು ಮುಂದೆ ತಾನು ಪಾಲ್ಗೊಳ್ಳುವುದಿಲ್ಲ ಎಂದು ಬೇಸರದಿಂದ ನುಡಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)