Don't Miss!
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- News Dr.Rajkumar: ಹುಟ್ಟೂರಲ್ಲಿ ಮುತ್ತುರಾಜಣ್ಣನ ನೆನಪುಗಳು ನೂರಾರು.. ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದುವೆಮನೆಯಲ್ಲಿ ಸವಾಲಿಗೆ ಪ್ರತಿಸವಾಲು
'ಮದುವೆಮನೆ'ಗೆ ವಧು ಪ್ರವೇಶ ಮಾಡಬೇಕು ಆದರೆ ಆಕೆ ಬೇರೊಬ್ಬನಿಂದ ಬಂಧಿತಳಾಗಿರುತ್ತಾಳೆ. ಈ ವಿಷಯವನ್ನು ಅರಿತ ನಾಯಕ ಆಕೆಯನ್ನು ಬಂಧಿಸಿರುವ ವ್ಯಕ್ತಿಯ ಬಳಿ ಬಂದು ''ವಧುವನ್ನು ನೀನೇ ಕಲ್ಯಾಣ ಮಂಟಪಕ್ಕೆ ಕರೆದುಕೊಂಡು ಬರಬೇಕು. ಹಾಗೇ ಮಾಡ್ತೀಯಾ ನೋಡು'' ಎಂದು ಸವಾಲು ಹಾಕುತ್ತಾನೆ. ಬಂಧಿಸಿರುವ ವ್ಯಕ್ತಿ ಕೂಡ ನಾಯಕನಿಗೆ ಪ್ರತಿ ಸವಾಲು ಹಾಕುತ್ತಾನೆ.
ಈ ಸನ್ನಿವೇಶವನ್ನು 'ಮದುವೆಮನೆ' ಚಿತ್ರಕ್ಕಾಗಿ ನಿರ್ದೇಶಕ ಸುನೀಲ್ಕುಮಾರ್ ಸಿಂಗ್ ರಾಮೋಹಳ್ಳಿ ಬಳಿಯ ಜಿ.ವಿ ಅಯ್ಯರ್ ಸ್ಟುಡಿಯೋದಲ್ಲಿ ಚಿತ್ರೀಕರಿಸಿಕೊಂಡರು. ಗಣೇಶ್, ಅವಿನಾಶ್(ಜುಗಾರಿ) ಈ ಸನ್ನಿವೇಶದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಜೆ.ಜೆ ಇಂಟರ್ ನ್ಯಾಷನಲ್ ಸಂಸ್ಥೆಯ ಮೂಲಕ ರುಹಿನಾ ರೆಹಮಾನ್ ಅವರು ನಿರ್ಮಿಸುತ್ತಿರುವ 'ಮದುವೆಮನೆ' ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.
ಗಣೇಶ್, ಅವಿನಾಶ್(ಜುಗಾರಿ), ಶ್ರದ್ಧಾಆರ್ಯ, ತಬಲನಾಣಿ, ಅರವಿಂದ್, ಶರಣ್ ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಕಲಾವಿದರು.ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರ ಸಂಗೀತವಿದೆ. ಶೇಖರ್ಚಂದ್ರು ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ರವಿವರ್ಮ ಸಾಹಸ, ಮೋಹನ್ ಬಿ ಕೆರೆ ಕಲಾನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಗಣೇಶ್, ಅವಿನಾಶ್(ಜುಗಾರಿ), ಶ್ರದ್ಧಾಆರ್ಯ, ತಬಲನಾಣಿ, ಶರಣ್, ಅರವಿಂದ್, ಹನುಮಂತೇಗೌಡ, ಕೆ.ವಿ.ನಾಗೇಶ್ಕುಮಾರ್, ಎಂ.ಎನ್.ಎಂ. ಚಿತ್ಕಲಾ, ಡಾ:ನಾಗೇಶ್, ಜಾದವ್ಮೈಸೂರು, ಚಿನ್ನ ಮುಂತಾದವರಿದ್ದಾರೆ.