Don't Miss!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಕಾಶ್ ರೈ ನಿರ್ಮಾಣದಲ್ಲಿ ಕನ್ನಡಕ್ಕೆ ತೆಲುಗಿನ ಐತೇ
'ನಾನು ನನ್ನ ಕನಸು' ಗೆಲುವಿನ ಸಂತಸದಲ್ಲಿರುವ ಪ್ರಕಾಶ್ ರೈ ಅವರ ಡ್ಯ್ಯುಯೆಟ್ ಮೂವೀಸ್ ಮತ್ತು ಮೀಡಿಯಾ ಹೌಸ್ ಚಿತ್ರ ನಿರ್ಮಾಣ ಸಂಸ್ಥೆಗಳು ಮತ್ತೆರಡು ಚಿತ್ರಗಳನ್ನು ನಿರ್ಮಿಸಲು ಮುಂದಾಗಿವೆ. ಮೀಡಿಯಾ ಹೌಸ್ ನ ಪಾಲುದಾರದಲ್ಲಿ ಒಬ್ಬರಾದ ಬಿ ಸುರೇಶ್ ನಿರ್ದೇಶನದಲ್ಲಿ ಒಂದು ಚಿತ್ರ ಮೂಡಿಬರಲಿದೆ. ಈ ಚಿತ್ರಗಳಿಗೆ ಸಂಬಂಧಿಸಿದ ಸ್ಕ್ರಿಪ್ಟ್ ವರ್ಕ್ ಈಗಾಗಲೆ ಸಿದ್ಧವಾಗಿದೆ.
ಪ್ರಕಾಶ್ ರೈ ಮತ್ತೊಂದು ಚಿತ್ರವನ್ನು ನಿರ್ಮಿಸಲಿದ್ದು ಅವರ ನಿರ್ದೇಶನದ ಜವಾಬ್ದಾರಿಯನ್ನು ದಯಾಳ್ ಪದ್ಮನಾಭನ್ ಗೆ ವಹಿಸಿದ್ದಾರೆ. ತೆಲುಗಿನ 'ಐತೇ' ಎಂಬ ಯಶಸ್ವಿ ಚಿತ್ರವನ್ನು ಕನ್ನಡಕ್ಕೆ ತರುವ ಪ್ರಯತ್ನವನ್ನು ಪ್ರಕಾಶ್ ರೈ ಮಾಡುತ್ತಿದ್ದಾರೆ. ಚಿತ್ರದ ತಾರಾಗಣ, ತಾಂತ್ರಿಕ ವರ್ಗದ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ.
ಬಿ ಸುರೇಶ್ ನಿರ್ದೇಶಿಸಲಿರುವ ಚಿತ್ರಕ್ಕೆ 'ಮಿಠಾಯಿ' ಎಂದು ಹೆಸರಿಡಲಾಗಿದೆ ಎಂಬುದು ಸದ್ಯದ ಮಾಹಿತಿ. ತನ್ನ ಸುತ್ತಮುತ್ತಲಿನ ಜನಕ್ಕೆ ಪ್ರೀತಿ ಹಂಚುವ ವ್ಯಕ್ತಿಯಾಗಿ ಪ್ರಕಾಶ್ ರೈ ಈ ಚಿತ್ರದಲ್ಲಿ ಕಾಣಿಸಲಿದ್ದಾರೆ. ಒಟ್ಟಿನಲ್ಲಿ ಪ್ರಕಾಶ್ ರೈ ಕನ್ನಡ ಚಿತ್ರರಂಗದಲ್ಲಿ ಮತ್ತಷ್ಟು ಪ್ರಯೋಗಗಳನ್ನು ಮಾಡಲು ಸಿದ್ಧರಾಗಿದ್ದಾರೆ.