ಬೆಳ್ಳಿಹೆಜ್ಜೆಯಲ್ಲಿ ಪ್ರಣಯರಾಜ ಶ್ರೀನಾಥ್ ಜತೆ ಮಾತುಕತೆ

ರಂಗಭೂಮಿ ಹಿನ್ನೆಲೆಯಿಂದ ಬಂದ ಶ್ರೀನಾಥ್ ಅವರನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದು ಪುಟ್ಟಣ್ಣ ಕಣಗಾಲ್. 'ಲಗ್ನ ಪತ್ರಿಕೆ' ಚಿತ್ರದ ಮೂಲಕ ಆರಂಭವಾದ ಅವರ ಸಿನಿ ಪಯಣ 400 ಚಿತ್ರಗಳ ಮೈಲುಗಲ್ಲಿಗೆ ಸಾಕ್ಷಿಯಾಯಿತು. ಶ್ರೀನಾಥ್ ಅವರು ಪೂರ್ಣ ಪ್ರಮಾಣದ ನಾಯಕರಾಗಿ ಬೆಳ್ಳಿತೆರೆಗೆ ಪರಿಚಯವಾಗಿದ್ದು 'ಮಧುರ ಮಿಲನ' ಚಿತ್ರದ ಮೂಲಕ.
ಕೊಲಂಬಿಯಾ ವಿಶ್ವವಿದ್ಯಾಲಯ ಶ್ರೀನಾಥ್ ಅವರಿಗೆ ಡಾಕ್ಟರೇಟ್ ಗೌರವವನ್ನು ಕೊಟ್ಟು ಸನ್ಮಾನಿಸಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ನಡೆಸುವ 'ಬೆಳ್ಳಿ ಹೆಜ್ಜೆ' ಕಾರ್ಯಕ್ರಮದಲ್ಲಿ ನವೆಂಬರ್ 12ರಂದು ಸಂಜೆ 4 ಗಂಟೆಗೆ ಡಾ.ಶ್ರೀನಾಥ್ ಭಾಗವಹಿಸಲಿದ್ದಾರೆ. ಅವರ ಸಿನಿಮಾ ಜೀವನದ ಅನುಭವಗಳನ್ನು ಪ್ರೇಕ್ಷಕರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಬೆಸುಗೆ, ಶುಭಮಂಗಳ, ಮಾನಸ ಸರೋವರ, ಗರುಡ ರೇಖೆ, ಪಾಯಿಂಟ್ ಪರಿಮಳ, ಕಿಲಾಡಿ ಜೋಡಿ, ಎರಡು ರೇಖೆಗಳು, ಪಟ್ಟಣ್ಣಕ್ಕೆ ಬಂದ ಪತ್ನಿಯರು ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯಕ್ಕೆ ಕಿರುತೆಯಲ್ಲೂ ಬ್ಯುಸಿಯಾಗಿದ್ದು ಬಂಗಾರ, ಜಗಳಗಂಟಿಯರು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. (ಒನ್ಇಂಡಿಯಾ ಕನ್ನಡ)


Click it and Unblock the Notifications











