Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರದಲ್ಲಿ ನಟಿಸುವ ಆಸೆ: ರಜನಿಕಾಂತ್
ಕನ್ನಡ ಚಲನಚಿತ್ರದ ಅಮೃತ ಮಹೋತ್ಸವ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ರಜನೀಕಾಂತ್ ಮಾತನಾಡುತ್ತಿದ್ದರು. ಈಗಿನ ಪೀಳಿಗೆಯವರಿಗೆ ಕಾದಂಬರಿ ಓದುವ ಹವ್ಯಾಸ ಕಡಿಮೆಯಾಗಿದೆ. ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಸಾಕಷ್ಟು ಕಾದಂಬರಿಗಳನ್ನು ಓದುತ್ತಿದ್ದೆ. ಹೆಚ್ಚು ಹೆಚ್ಚು ಸಾಹಿತ್ಯ ಕೃತಿಗಳನ್ನು ಓದಿಯೆಂದು ವಿದ್ಯಾರ್ಥಿಗಳಿಗೆ ರಜನಿ ಮನವಿ ಮಾಡಿದರು.
ನಾನು ರಾಜಣ್ಣನನ್ನು ತುಂಬಾ ಮಿಸ್ ಮಾಡ್ಕೋತಾಯಿದ್ದೀನಿ. ಅತಿರಥ ಮಹಾರಾಥರಗಿದ್ದ ರಾಜ್ ಅವರ ಸಂತ ತುಕಾರಾಂ ಮತ್ತಿತ್ತರ ಚಿತ್ರಗಳು ನನ್ನಲ್ಲಿ ಬಹಳಷ್ಟು ಪರಿಣಾಮ ಬೀರಿದೆ. ಅಣ್ಣನ ಬಗ್ಗೆ ತುಂಬಾ ಮಾತಾಡಿ ಪಾರ್ವತಮ್ಮ ಅವರ ಮನಸ್ಸು ನೋಯಿಸುವುದು ನನಗೆ ಇಷ್ಟವಿಲ್ಲ ಎಂದು ರಜನಿ ಸಮಾರಂಭದಲ್ಲಿ ಹೇಳಿದರು.
ಕನ್ನಡ ಚಿತ್ರರಂಗದ ಎಪ್ಪತ್ತೈದು ವರ್ಷದ ಸಮಾರಂಭ ಹೆಮ್ಮೆಯ ವಿಷಯ. ಡಾ. ರಾಜ್ ಅವರ ಅಗಲಿಕೆ ಈ ಮಹೋತ್ಸವದ ದೊಡ್ಡ ಕೊರಗು ಎಂದು ಇನ್ನೊಬ್ಬ ಖ್ಯಾತ ನಟ ಪ್ರಕಾಶ್ ರೈ ಈ ಸಂದರ್ಭದಲ್ಲಿ ಹೇಳಿದರು.
ಕನ್ನಡ ಚಿತ್ರರಂಗಕ್ಕೆ ಡಾ. ರಾಜ್ ಅವರ ಕೊಡುಗೆ ಅಪಾರ. ಸರಕಾರ ರಾಜ್ ಸ್ಮಾರಕಕ್ಕೆ ಹೆಚ್ಚಿನ ಜಮೀನು ನೀಡಿ ಕಾಮಗಾರಿ ತ್ವರಿತಗೊಳಿಸಬೇಕು ಎಂದು ಖ್ಯಾತ ನಟಿ ಜಯಪ್ರದ ಆಗ್ರಹಿಸಿದರು. ಸಮಾರಂಭದಲ್ಲಿ ಪ್ರಭುದೇವ ಮತ್ತು ಹಿರಿಯ ನಟ ನಟಿಯರು ಮತ್ತು ತಂತ್ರಜ್ಞರು ಭಾಗವಹಿಸಿದ್ದರು.
(ದಟ್ಸ್
ಕನ್ನಡ
ಚಿತ್ರವಾರ್ತೆ)
ಕನ್ನಡ,ತಮಿಳು
ಸಂಬಂಧಕ್ಕೆ
ಕಲ್ಲು
ಹಾಕಬೇಡಿ:ಕಮಲ್
ಪೈರಸಿ
ತಡೆಗೆ
ಶೀಘ್ರ
ಕಾನೂನು:
ಯಡಿಯೂರಪ್ಪ
ಅಮೃತ
ಮಹೋತ್ಸವ
ಪುಸ್ತಕಗಳು
ಅನಾವರಣ