Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರದಲ್ಲಿ ನಟಿಸುವ ಆಸೆ: ರಜನಿಕಾಂತ್
ಕನ್ನಡ ಚಲನಚಿತ್ರದ ಅಮೃತ ಮಹೋತ್ಸವ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ರಜನೀಕಾಂತ್ ಮಾತನಾಡುತ್ತಿದ್ದರು. ಈಗಿನ ಪೀಳಿಗೆಯವರಿಗೆ ಕಾದಂಬರಿ ಓದುವ ಹವ್ಯಾಸ ಕಡಿಮೆಯಾಗಿದೆ. ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಸಾಕಷ್ಟು ಕಾದಂಬರಿಗಳನ್ನು ಓದುತ್ತಿದ್ದೆ. ಹೆಚ್ಚು ಹೆಚ್ಚು ಸಾಹಿತ್ಯ ಕೃತಿಗಳನ್ನು ಓದಿಯೆಂದು ವಿದ್ಯಾರ್ಥಿಗಳಿಗೆ ರಜನಿ ಮನವಿ ಮಾಡಿದರು.
ನಾನು ರಾಜಣ್ಣನನ್ನು ತುಂಬಾ ಮಿಸ್ ಮಾಡ್ಕೋತಾಯಿದ್ದೀನಿ. ಅತಿರಥ ಮಹಾರಾಥರಗಿದ್ದ ರಾಜ್ ಅವರ ಸಂತ ತುಕಾರಾಂ ಮತ್ತಿತ್ತರ ಚಿತ್ರಗಳು ನನ್ನಲ್ಲಿ ಬಹಳಷ್ಟು ಪರಿಣಾಮ ಬೀರಿದೆ. ಅಣ್ಣನ ಬಗ್ಗೆ ತುಂಬಾ ಮಾತಾಡಿ ಪಾರ್ವತಮ್ಮ ಅವರ ಮನಸ್ಸು ನೋಯಿಸುವುದು ನನಗೆ ಇಷ್ಟವಿಲ್ಲ ಎಂದು ರಜನಿ ಸಮಾರಂಭದಲ್ಲಿ ಹೇಳಿದರು.
ಕನ್ನಡ ಚಿತ್ರರಂಗದ ಎಪ್ಪತ್ತೈದು ವರ್ಷದ ಸಮಾರಂಭ ಹೆಮ್ಮೆಯ ವಿಷಯ. ಡಾ. ರಾಜ್ ಅವರ ಅಗಲಿಕೆ ಈ ಮಹೋತ್ಸವದ ದೊಡ್ಡ ಕೊರಗು ಎಂದು ಇನ್ನೊಬ್ಬ ಖ್ಯಾತ ನಟ ಪ್ರಕಾಶ್ ರೈ ಈ ಸಂದರ್ಭದಲ್ಲಿ ಹೇಳಿದರು.
ಕನ್ನಡ ಚಿತ್ರರಂಗಕ್ಕೆ ಡಾ. ರಾಜ್ ಅವರ ಕೊಡುಗೆ ಅಪಾರ. ಸರಕಾರ ರಾಜ್ ಸ್ಮಾರಕಕ್ಕೆ ಹೆಚ್ಚಿನ ಜಮೀನು ನೀಡಿ ಕಾಮಗಾರಿ ತ್ವರಿತಗೊಳಿಸಬೇಕು ಎಂದು ಖ್ಯಾತ ನಟಿ ಜಯಪ್ರದ ಆಗ್ರಹಿಸಿದರು. ಸಮಾರಂಭದಲ್ಲಿ ಪ್ರಭುದೇವ ಮತ್ತು ಹಿರಿಯ ನಟ ನಟಿಯರು ಮತ್ತು ತಂತ್ರಜ್ಞರು ಭಾಗವಹಿಸಿದ್ದರು.
(ದಟ್ಸ್
ಕನ್ನಡ
ಚಿತ್ರವಾರ್ತೆ)
ಕನ್ನಡ,ತಮಿಳು
ಸಂಬಂಧಕ್ಕೆ
ಕಲ್ಲು
ಹಾಕಬೇಡಿ:ಕಮಲ್
ಪೈರಸಿ
ತಡೆಗೆ
ಶೀಘ್ರ
ಕಾನೂನು:
ಯಡಿಯೂರಪ್ಪ
ಅಮೃತ
ಮಹೋತ್ಸವ
ಪುಸ್ತಕಗಳು
ಅನಾವರಣ