Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ತೆರೆಗೆ 'ಯಾರೆ ನೀ ದೇವತೆ'
ಖ್ಯಾತ ಸಂಕಲನಕಾರ ಎಸ್.ಕೆ.ನಾಗೇಂದ್ರ ಅರಸ್ ಈ ಚಿತ್ರದ ನಿರ್ದೇಶನದ 'ಯಾರೆ ನೀ ದೇವತೆ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಕಲನದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
ಬೆಂಗಳೂರು, ರಾಮನಗರ, ಕಾಸರಗೋಡು ಮುಂತಾದಕಡೆ ಚಿತ್ರದ ಚಿತ್ರೀಕರಣ ನಡೆದಿದೆ. ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಸಂಗೀತ 'ಯಾರೆ ನೀ ದೇವತೆ' ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಎಸ್.ಕೆ.ನಾಗೇಂದ್ರ ಅರಸ್, ಗಿರಿದಿನೇಶ್, ಧರ್ಮ, ಮೋಹನ್ ಜುನೇಜಾ, ಮಳವಳ್ಳಿ ಸಾಯಿಕೃಷ್ಣ ಮುಂತಾದ ಕಲಾವಿದರ ತಾರಾಬಳಗ ಈ ಚಿತ್ರಕ್ಕಿದೆ.
ಚಂದ್ರು ಬೆಳವಂಗಲ ಅವರ ಛಾಯಾಗ್ರಹಣವಿರುವ ಚಿತ್ರಕ್ಕೆ ವೆಂಕಟ್, ನಾರಾಯಣ್ ಅವರ ಸಂಗೀತವಿದೆ. ಕೌರವ ವೆಂಕಟೇಶ್ ಸಾಹಸ, ಹರೀಶ್ ಶೃಂಗ-ಗಿರೀಶ್ ಸಂಭಾಷಣೆ, ತಂಗಾಳಿ ನಾಗರಾಜ್, ಸಂತೋಷ್ ಗೀತರಚನೆ ಹಾಗೂ ರಾಜು ಅವರ ನಿರ್ಮಾಣ ನಿರ್ವಹಣೆ 'ಯಾರೇ ನೀ ದೇವತೆ ಚಿತ್ರಕ್ಕಿದೆ. ಶ್ರೀಮಾತಾ ಅನ್ನಪೂರ್ಣೇಶ್ವರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಚಂದ್ರಕಲಾಬೆಟ್ಟಸ್ವಾಮಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.