Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಸರವಳ್ಳಿಗೆ ಸಿಂಬಿಯಾಸಿಸ್ ಪ್ರಶಸ್ತಿ
ಸ್ವರ್ಣಕಮಲಗಳ ನಿರ್ದೇಶಕ ಎಂದೇ ಹೆಸರಾದ ಪ್ರಸಿದ್ಧ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಪುಣೆಯ ಸಿಂಬಿಯಾಸಿಸ್ ಸಮೂಹ ಮಾಧ್ಯಮ ಸಂಸ್ಥೆಯ ವಾರ್ಷಿಕ ಪ್ರಶಸ್ತಿ ದೊರೆತಿದೆ.
ವಿವಿಧ ಕಾಲಘಟ್ಟದ ತಲ್ಲಣಗಳನ್ನು ಕಾಸರವಳ್ಳಿಯವರ ಚಿತ್ರಗಳು ಸಮರ್ಥವಾಗಿ ಅಭಿವ್ಯಕ್ತಿಸಿವೆ. ಸಾಮಾಜಿಕ ಮತ್ತು ರಾಜಕೀಯ ಸಂಕ್ರಮಣ ಪರಿಸ್ಥಿತಿಗಳಲ್ಲಿ ವ್ಯಕ್ತಿತ್ವದ ತುಮುಲಗಳನ್ನು ಚಿತ್ರ ಮಾಧ್ಯಮದಲ್ಲಿ ಕಾಸರವಳ್ಳಿಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ ಎಂದು ಸಿಂಬಿಯಾಸಿಸ್ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಾಸರವಳ್ಳಿಯವರನ್ನು ಬಣ್ಣಿಸಲಾಗಿದೆ.
ಡಿಸೆಂಬರ್ 11 ರಂದು ಪುಣೆಯಲ್ಲಿ ನಡೆಯುವ ಸಮಾರಂಭದಲ್ಲಿ ಕಾಸರವಳ್ಳಿ ಅವರು ಸಿಂಬಿಯಾಸಿಸ್ನ ಮಾಧ್ಯಮ ಶ್ರೇಷ್ಠ ಪ್ರಶಸ್ತಿ ಪಡೆಯುವರು. ಆರ್.ಕೆ.ಲಕ್ಷ್ಮಣ್, ಮಹೇಶ್ ಭಟ್, ರಮೇಶ್ ಸಿಪ್ಪಿ , ಗುಲ್ಜಾರ್, ಕುಲದೀಪ್ ನಯ್ಯರ್, ಬಿ.ಆರ್.ಛೋಪ್ರಾ ಈ ಮುನ್ನ ಸಿಂಬಿಯಾಸಿಸ್ ವಾರ್ಷಿಕ ಪ್ರಶಸ್ತಿ ಪಡೆದಿದ್ದಾರೆ.
ಪ್ರಶಸ್ತಿ ನೀಡುವ ಮೂಲಕ ಕನ್ನಡ ಚಿತ್ರರಂಗದಲ್ಲಿನ ಸಾಧನೆಯನ್ನು ಸಿಂಬಿಯಾಸಿಸ್ ಗುರ್ತಿಸಿದೆ. ಈವರೆಗೆ ಉತ್ತರಭಾರತದವರಿಗೆ ಸೀಮಿತವಾಗಿದ್ದ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ ಎಂದು ಕಾಸರವಳ್ಳಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್