Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಚ್ಚಿನ ನಾಯಕ ಈಗ ಮದಕರಿ ನಾಯಕ?
ನಟ ದರ್ಶನ್ ಮತ್ತು ರಕ್ಷಿತಾ ಜೋಡಿಯಾಗಿ ನಟಿಸುತ್ತಿರುವ ‘ಸುಂಟರಗಾಳಿ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.
‘ಸ್ವಾಮಿ’ ಚಿತ್ರದ ಸೋಲಿನಿಂದ ಕಂಗೆಟ್ಟಿರುವ ದರ್ಶನ್ಗೆ ಸಾಧುಕೋಕಿಲಾ ನಿರ್ದೇಶನದ, ‘ಸುಂಟರಗಾಳಿ’ ತಂಪುಗಾಳಿಯಾಗುವುದೇನೋ ಕಾದು ನೋಡಬೇಕು. ಅಭಿಮಾನಿಗಳ ಪಾಲಿಗೆ ‘ಮಚ್ಚಿ’ನ ನಾಯಕರಾಗಿರುವ ನಟ ದರ್ಶನ್, ಈ ಮಧ್ಯೆ ವೈವಿಧ್ಯಮಯ ಪಾತ್ರಗಳತ್ತ ಗಮನಹರಿಸಿದ್ದಾರೆ.
ಗುರುದತ್ ನಿರ್ದೇಶನದ ‘ದತ್ತ ’ ಚಿತ್ರದಲ್ಲಿ ಹಾಸ್ಯ ಪಾತ್ರ, ‘ಸುಂಟರಗಾಳಿ’ಯಲ್ಲಿ ವೈವಿಧ್ಯಮಯ ಪಾತ್ರ ಮಾಡುತ್ತಿದ್ದಾರೆ ಎಂಬ ಸುದ್ದಿಗಳ ಮಧ್ಯೆ, ಐತಿಹಾಸಿಕ ನಾಯಕನ ಪಾತ್ರಕ್ಕೆ ದರ್ಶನ್ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ದಟ್ಟವಾಗಿ ಹಬ್ಬಿದೆ.
ವೇಣು ಅವರ ‘ಮದಕರಿ ನಾಯಕ’ ಕಾದಂಬರಿಯನ್ನು ಚಿತ್ರವಾಗಿಸುವ ಪ್ರಯತ್ನಗಳು ನಡೆದಿವೆ. ಕೆ.ಸಿ.ಎನ್. ಗೌಡ ಚಿತ್ರದ ನಿರ್ಮಾಣಕ್ಕೆ ಮುಂದಾಗಿದ್ದು, ದರ್ಶನ್ ಮದಕರಿನಾಯಕನ ಪಾತ್ರ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಟ ಶಿವರಾಜ್ಕುಮಾರ್ ಅಭಿನಯದ ‘ಕುಮಾರರಾಮ’ ಸೆಟ್ಟೇರಿರುವ ಬೆನ್ನಲ್ಲಿಯೇ ಮತ್ತೊಂದು ಐತಿಹಾಸಿಕ ಚಿತ್ರ ‘ಮದಕರಿ ನಾಯಕ’ ಸೆಟ್ಟೇರಿದರೆ, ಕನ್ನಡಿಗರಿಗೆ ಅದಕ್ಕಿಂತ ಭಾಗ್ಯ ಬೇಕೇ?
ಮುಖಪುಟ / ಸ್ಯಾಂಡಲ್ವುಡ್