Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಗೆ ಕಲರ್ನಲ್ಲಿ ಅಣ್ಣಾವ್ರ ಕಸ್ತೂರಿ ನಿವಾಸ
ಮೂಲ ಚಿತ್ರದ ನಿರ್ಮಾಪಕರಾದ ಕೆಸಿಎನ್ ಗೌಡರ ಪುತ್ರ ಕೆಸಿ ಮೋಹನ್ ಈ ಚಿತ್ರವನ್ನು ಬಣ್ಣದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಈ ಬಗ್ಗೆ ವಿವರ ನೀಡಿರುವ ಮೋಹನ್, "ಒರಿಜಿನಲ್ ಚಿತ್ರದ ಕಾರ್ಬನ್ ಕಾಪಿ ಇದಲ್ಲ. ಹಾಡುಗಳು ಚಿತ್ರದ ಪ್ರಮುಖ ಹೈಲೈಟ್. ಹಾಡುಗಳು ಹಾಗೂ ಸಂಭಾಷಣೆಗೆ ಡಿಟಿಎಸ್ ಅಳವಡಿಸಲಾಗಿದ್ದು ಪ್ರೇಕ್ಷಕರಿಗೆ ಸಮೃದ್ಧ ಅನುಭವ ನೀಡಲಿದೆ" ಎಂದಿದ್ದಾರೆ.
ಕಪ್ಪು ಬಿಳುಪಿನ 'ಕಸ್ತೂರಿ ನಿವಾಸ' ಚಿತ್ರ ಬಣ್ಣದ ಬೆಳಕಿನಲ್ಲಿ ಮತ್ತೊಮ್ಮೆ ತೆರೆಕಾಣುತ್ತಿದ್ದು ಈ ಚಿತ್ರ ಮತ್ತೊಮ್ಮೆ ಪ್ರೇಕ್ಷಕರ ಮನಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ಬಿ ದೊರೈ ರಾಜ್ ಹಾಗೂ ಎಸ್ ಕೆ ಭಗವಾನ್ ನಿರ್ದೇಶಿಸಿದ್ದ ಈ ಚಿತ್ರವನ್ನು ಕೊಳ್ಳಲು ಆರಂಭದಲ್ಲಿ ವಿತರಕರು ಹಿಂದೇಟು ಹಾಕಿದ್ದರು. ಆದರೆ ಒಂದೇ ವಾರದಲ್ಲಿ ಸುಮಧುರ ಹಾಡುಗಳು, ಕತೆ, ಅಣ್ಣಾವ್ರ ಅಭಿನಯದಿಂದ ಚಿತ್ರ ಪ್ರೇಕ್ಷಕರ ಮನಗೆದ್ದಿತ್ತು. ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದು ಇತಿಹಾಸ.
ಚಿತ್ರದ ಪಾತ್ರವರ್ಗದಲ್ಲಿ ಜಯಂತಿ, ಆರತಿ ಹಾಗೂ ದಿವಂಗತ ಕೆಎಸ್ ಅಶ್ವತ್ಥ್ ಮುಂತಾದವರಿದ್ದರು. ಪಿಬಿ ಶ್ರೀನಿವಾಸ್ ಹಾಗೂ ಪಿ ಸುಶೀಲಾ ಹಾಡಿರುವ "ನೀ ಬಂದು ನಿಂತಾಗ..." ಹಾಗೂ ಪಿಬಿಎಸ್ ಅವರ "ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..." ಹಾಡುಗಳ ಜನಪ್ರಿಯತೆ ಇಂದಿಗೂ ಮಾಸಿಲ್ಲ. ಚಿತ್ರದ ಜನಪ್ರಿಯತೆಗೆ ಇದೇ ಸಾಕ್ಷಿ. (ಒನ್ಇಂಡಿಯಾ ಕನ್ನಡ)