Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಳೆಯಲ್ಲಿ ಜೊತೆಯಲ್ಲಿ' ಗಣೇಶ್ ಮತ್ತು ಶಿಲ್ಪಾ!
ಸುಮಾರು ಎರಡು ವರ್ಷಗಳ ಹಿಂದೆಯೇ ಗಣೇಶ್ ಗೆ ಪ್ರೀತಂ ಚಿತ್ರದ ಕಥೆಯನನ್ನು ಹೇಳಿದ್ದರು. ಆದರೆ ಗಣೇಶ್ ಅವರ ಬಿಡುವಿಲ್ಲದ ಕಾಲಶೀಟ್ ನಿಂದಾಗಿ ಮುಂದಕ್ಕೆ ಹೋಗಿತ್ತು. ಈಗ ಪ್ರೀತಂ ಮತ್ತು ಗಣೇಶ್ ಗೆ ಹಿಟ್ ಚಿತ್ರವೊಂದನ್ನು ನೀಡುವ ಅವಶ್ಯಕತೆಯಿದೆ. ಗಣೇಶ್ ಅಭಿನಯದ ಹಿಂದಿನ ಚಿತ್ರ 'ಸರ್ಕಸ್' ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿದ್ದರೆ, ಪ್ರೀತಂ ನಿರ್ದೇಶನದ 'ಹಾಗೆ ಸುಮ್ಮನೆ' ಚಿತ್ರ ತಕ್ಕ ಮಟ್ಟಿಗೆ ಯಶಸ್ಸು ಕಂಡಿತ್ತು.
'ಮಳೆಯಲ್ಲಿ ಜೊತೆಯಲ್ಲಿ' ಚಿತ್ರಕ್ಕೆ ಸದ್ಯಕ್ಕೆ ಸ್ಯಾಂಡಲ್ ವುಡ್ ನ ಯಶಸ್ವಿ ಸಂಗೀತ ನಿರ್ದೇಶಕ ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದಾರೆ. ಎಸ್ ಕೃಷ್ಣ ಚಿತ್ರಕ್ಕೆ ಕ್ಯಾಮರಾ ಹಿಡಿಯಲಿದ್ದಾರೆ. ಚಿತ್ರದ ನಾಯಕಿಯ ಆಯ್ಕೆ ಇನ್ನೂ ಆಗಬೇಕಿದೆ. ಚಿತ್ರತಂಡದ ಪ್ರಕಾರ ಬಾಲಿವುಡ್ ಅಥವಾ ದಕ್ಷಿಣದ ಹೆಸರಾಂತ ನಟಿಯೊಬ್ಬರನ್ನು ಚಿತ್ರಕ್ಕೆ ಪರಿಚಯಿಸುವ ಸಂಭವವಿದೆ.
ಏತನ್ಮಧ್ಯೆ ಗಣೇಶ್ ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರ ಕಳೆದ ವರ್ಷದ ಯಶಸ್ವಿ ಚಿತ್ರ 'ಬಿಂದಾಸ್' ನಿರ್ಮಿಸಿದ್ದ ನಿಮಿಷಾಂಬ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ಬರಲಿದೆ. ನಿರ್ಮಾಪಕ ಚಂದ್ರಶೇಖರ್ ಈ ಚಿತ್ರಕ್ಕೆ ಹೆಸರಾಂತ ತೆಲುಗು ನಟಿ ಇಲಿಯಾನಾ ಅವರನ್ನು ಪರಿಚಯಿಸುವ ಚಿಂತನೆ ನಡೆಸಿದ್ದಾರೆ. ಗಣೇಶ್ ಮತ್ತು ಯಾಮಿನಿ ಗೌತಂ ಮುಖ್ಯ ಭೂಮಿಕೆಯ "ಉಲ್ಲಾಸ ಉತ್ಸಾಹ" ಚಿತ್ರ ಸದ್ಯದಲ್ಲೇ ತೆರೆಕಾಣಲಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)