Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ಯಾಂಕಾಕ್ ನಲ್ಲಿ ಮಿಥುನ್ ತೇಜಸ್ವಿ 'ಅಂತರಾತ್ಮ'
ಮಿಥುನ್ ತೇಜಸ್ವಿ ಹಾಗೂ ರೋಹನ್ ಗೌಡ 'ಅಂತರಾತ್ಮ' ಚಿತ್ರದಲ್ಲಿ ಉತ್ತಮ ಸ್ನೇಹಿತರು. ಸ್ನೇಹಿತನ ಕಷ್ಟಕ್ಕೆ ಸ್ಪಂದಿಸಿದ ಮಿಥುನ್ ಹಣದ ಸಹಾಯ ಮಾಡಿರುತ್ತಾರೆ. ಕಷ್ಟ ಕಾಲದಲ್ಲಿ ನೆರವಾದ ಗೆಳೆಯನ ಹಣವನ್ನು ಬಳಸಿಕೊಂಡ ರೋಹನ್ನಿಂದ ಅದ್ದನ್ನು ಹಿಂತಿರುಗಿಸುವ ಲಕ್ಷಣಗಳೇ ಕಂಡು ಬರುವುದಿಲ್ಲ. ಆತನ ನಡುವಳಿಕೆಯಿಂದ ನೊಂದ ಮಿಥುನ್, ರೋಹನ್ ಕಾರ್ಯ ನಿರ್ವಹಿಸುವ ಬ್ಯಾಂಕ್ಗೆ ಆಗಮಿಸಿ ಅವನೊಂದಿಗೆ ಜಗಳವಾಡುವ ಸನ್ನಿವೇಶವನ್ನು ಮಾರತಹಳ್ಳಿ ರಿಂಗ್ ರಸ್ತೆಯಲ್ಲಿರುವ ಪ್ರಥಮ್ ಮೋಟಾರ್ಸ್ನಲ್ಲಿ ನಿರ್ದೇಶಕ ಬಿ.ಶಂಕರ್ ಚಿತ್ರೀಕರಿಸಿಕೊಂಡರು. ಮಿಥುನ್ ತೇಜಸ್ವಿ, ರೋಹನ್ ಗೌಡ ಹಾಗೂ ಸಹ ಕಲಾವಿದರು ಇಲ್ಲಿನ ಸನ್ನಿವೇಶಗಳ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಫ್ರೆಂಡ್ಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬಿ.ಶಂಕರ್ ಅವರು ಚಿತ್ರಕತೆ ಬರೆದು ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸುಂದರನಾಥ್ ಸುವರ್ಣರ ಛಾಯಾಗ್ರಹಣ, ಗಿರಿಧರ ದಿವಾನ್ ಸಂಗೀತ, ವಿ.ಮನೋಹರ್, ಚೇತನ್, ಆರ್ಯ ಗೀತರಚನೆ, ಶ್ರೀ ಸಂಕಲನ, ಮಂಜುನಾಥ್ ಸಂಭಾಷಣೆ, ಹೊಸ್ಮನೆ ಮೂರ್ತಿ ಕಲೆ, ಚಿನ್ನಿಪ್ರಕಾಶ್ ನೃತ್ಯ, ರಾಮಣ್ಣನವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಮಿಥುನ್ ತೇಜಸ್ವಿ, ವಿಶಾಖ ಸಿಂಗ್(ಬಾಂಬೆ), ರೋಹನ್ ಗೌಡ, ಸುಮನ್ ರಂಗನಾಥ್, ಉಮಾಶ್ರೀ, ಹರೀಶ್ ರಾಯ್, ಮೈಕಲ್ ಮಧು, ರೇಖಾದಾಸ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಮಂತ್ರವಾದಿ
ಪಾತ್ರದಲ್ಲಿ
ಮಿಂಚಲಿರುವ
ಉಮಾಶ್ರೀ
ಜಗ್ಗೇಶ್,
ಅಂಬರೀಶ್
ಈಗ
ಒಡೆದ
ಹೃದಯಗಳು
ಹೊಡಿಮಗ
ಇನ್ನು
ಹ್ಯಾಟ್ರಿಕ್
ಹೊಡಿಮಗ!
ಚಿತ್ರೋದ್ಯಮದಲ್ಲಿ
ರು.15
ಕೋಟಿ
ಹರಿಸಿದ
ಮಂಜು!