Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತಪ್ರಿಯ ಆರೋಗ್ಯ ಗಂಭೀರ; ಶುಭ ಹಾರೈಸಿರಿ
1978ರಲ್ಲಿ ಬಂದ ಹೊಂಬಿಸಿಲು ಚಿತ್ರದ ಜೀವ ವೀಣೆ ನೀಡು ಮಿಡಿತದ ಸಂಗೀತ, ಹೂವಿಂದ ಹೂವಿಗೆ ಹಾರುವ ದುಂಬಿ, 1968ರಲ್ಲಿ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಮಣ್ಣಿನ ಮಗ ಚಿತ್ರದ ಇದೇನ ಸಭ್ಯತೆ ಇದೇನ ಸಂಸ್ಕೃತಿ ಹಾಡುಗಳನ್ನು ಮರೆತವರುಂಟೆ. ಇಂಥ ಅಮರ ಗೀತೆಗಳನ್ನು ನೀಡಿದ ಗೀತಪ್ರಿಯ ಅವರು ಈಗ ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಗಂಟಲಲ್ಲಿ ಕಾಣಿಸಿಕೊಂಡಿದ್ದ ಗಂಟಿನ ಆಪರೇಷನ್ ಆದನಂತರ ಬೆಂಗಳೂರಿನ ಮಹಾಲಕ್ಷ್ಮಿಪುರಂ ಮನೆಯಲ್ಲಿ ಲಕ್ಷ್ಮಣರಾವ್ ಮೋಹಿತೆ (ಗೀತಪ್ರಿಯ) ಹಾಸಿಗೆ ಹಿಡಿದಿದ್ದಾರೆ. ಆಪರೇಷನ್ ಕಾರಣದಿಂದಾಗಿ ಮಾತಾಡಲು ಬಾಯಿ ತೆಗೆದರೂ ಮಾತೇ ಹೊರಡುತ್ತಿಲ್ಲ.
ಅವರ ಆಪ್ತಮಿತ್ರ ರಾಘವೇಂದ್ರ ರಾಜು ಮತ್ತು ಅಭಿಮಾನಿಗಳು ಗೀತಪ್ರಿಯ ಅವರ ನಿವಾಸಕ್ಕೆ ಶುಕ್ರವಾರ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಭಾವಸಾರ ಕ್ಷತ್ರಿಯ ಸಮಾದಾಯ ಗೀತಪ್ರಿಯ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ, 25 ಸಾವಿರ ರು. ನೀಡಿದೆ. ಖ್ಯಾತ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿಯವರು 1 ಲಕ್ಷ ರು. ನೀಡಿದ್ದಾರೆ.
ಅವರ ಚಿತ್ರಗೀತೆಗಳ ಅಭಿಮಾನಿಗಳು ಹಾಗು ಸದಭಿರುಚಿಯ ಕನ್ನಡ ಚಿತ್ರಗೀತ ಸಾಹಿತ್ಯಾಭಿಮಾನಿಗಳ ಪರವಾಗಿ ಒನ್ಇಂಡಿಯ ಕನ್ನಡ ಬಳಗ ಗೀತಪ್ರಿಯ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತದೆ.