Don't Miss!
- News Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನುಗೆ ಆ್ಯಕ್ಷನ್-ಕಟ್ ಹೇಳುವ ಬಯಕೆ
- ಸಿನಿಡೆಸ್ಕ್, ದಟ್ಸ್ ಕನ್ನಡ
ಅನು ಅವರಿಗೆ ನಟನೆಯ ಜೊತೆಗೆ ಚಿತ್ರ ನಿರ್ದೇಶಿಸುವ ಕನಸೂ ಇದೆಯಂತೆ. ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಮಕ್ಕಳ ಕಟಕಟೆ ಕಾರ್ಯಕ್ರಮದಲ್ಲಿ ಅವರೇ ಈ ಬಗ್ಗೆ ಬಾಯಿಬಿಟ್ಟು ಹೇಳಿದ್ದಾರೆ. ಜಯಮಾಲಾ, ಆರತಿಯಂತೆಯೇ ಮಕ್ಕಳ ಚಿತ್ರವನ್ನು ಕನ್ನಡದಲ್ಲಿ ನಿರ್ಮಿಸಿ, ನಿರ್ದೇಶಿಸುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.
ಮಕ್ಕಳ ಕಟಕಟೆಯಲ್ಲಿ ಕಣ್ಣುಗಳನ್ನು ಅರಳಿಸಿಕೊಂಡು ಮಾತಾಡುತ್ತಿದ್ದ ಅವರಿಗೆ ತಮ್ಮ ಅತ್ತೆ ಜಯಂತಿ ಅವರ ಜೊತೆ ಚುನಾವಣಾ ಪ್ರಚಾರಕ್ಕೆ ಹೋಗುವುದೆಂದರೆ ಖುಷಿಯಂತೆ. ತಾವು ಪ್ರೀತಿಸಿ ಮದುವೆಯಾದ ಗಂಡನನ್ನು ಪ್ರೀತಿಯಿಂದಲೇ ಕೇಕ್ ಎಂದು ಕರೆಯುವುದು ತಮಾಷೆಯಂತೆ! ಅವರ ಪತಿ ದೇವರ ಹೆಸರು ಕೃಷ್ಣಕುಮಾರ್!
ಗಾಯತ್ರಿ ಪ್ರಭಾಕರ್ ಅಕ್ಕರೆಯಲ್ಲಿ ಬೆಳೆದು, ನಟಿ ಜಯಂತಿ ಅವರ ಸೊಸೆಯಾಗಿರುವ ಅನು ವೈವಾಹಿಕ ಬದುಕಿನಲ್ಲಿ ನೆಮ್ಮದಿ ಕಂಡಿದ್ದಾರೆ. ಮೊದಲ ಚಿತ್ರದಲ್ಲಿಯೋ ಪ್ರೇಕ್ಷಕರ ಗಮನ ಸೆಳೆದ ಅನು ಪ್ರತಿಭಾವಂತೆ ಅನ್ನುವುದರಲ್ಲಿ ಎರಡು ಮಾತಿಲ್ಲ. ಮದುವೆ ನಂತರವೂ ಚಿತ್ರಗಳಲ್ಲಿ ನಟಿಸಲು ಅವರು ಸಿದ್ಧರಿದ್ದರು. ಆದರೆ ಅವರನ್ನು ತೆರೆಯ ಮೇಲೆ ಕಾಣಲು ಅಭಿಮಾನಿಗಳು ಸಿದ್ಧರಿಲ್ಲ. ‘ಪ್ರೀತಿ ಪ್ರೇಮ ಪ್ರಣಯ’ ಚಿತ್ರದಲ್ಲಿ ಮೈ ಚಳಿ ಬಿಟ್ಟು ಕುಣಿದರೂ ಅವರಿಗೆ ಪ್ರಯೋಜನವಾಗಲಿಲ್ಲ!
ತಮ್ಮ ಐದು ವರ್ಷಗಳ ಚಿತ್ರರಂಗದ ಅನುಭವವನ್ನೇ ಬಂಡವಾಳವಾಗಿಸಿಕೊಂಡು ಆ್ಯಕ್ಷನ್-ಕಟ್ ಹೇಳಲು ಅನು ಕನಸುಕಂಡಿದ್ದಾರೆ. ಕನಸು ನನಸಾಗಲಿ.
ಮುಖಪುಟ / ಸ್ಯಾಂಡಲ್ವುಡ್