Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಹೆಸರಿನ ಹಿಂಸಾಚಾರದಲ್ಲಿ ರಾಜಕೀಯ ಕೈವಾಡ?
ಬೆಂಗಳೂರು : ಡಾ.ರಾಜ್ಕುಮಾರ್ ನಿಧನದ ಸಂದರ್ಭದಲ್ಲಿ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರೂ ಪಾಲ್ಗೊಂಡಿದ್ದರೆಂಬ ಸಂಗತಿಯನ್ನು ಪೊಲೀಸರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.
ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಪೊಲೀಸ್ ಆಯುಕ್ತ ಡಾ.ಅಜಯಕುಮಾರ್ ಸಿಂಗ್, ಹಿಂಸಾಚಾರಕ್ಕೆ ರಾಜ್ ಅಭಿಮಾನಿಗಳ ಭಾವೋದ್ವೇಗವೊಂದೇ ಕಾರಣವಲ್ಲ. ತನಿಖೆಯ ಮೂಲಕ ಅನೇಕ ಕಾರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದರು.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ 742 ಮಂದಿಯನ್ನು ಬಂಧಿಸಲಾಗಿತ್ತು. ಅವರಲ್ಲಿ 306 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಛಾಯಾಚಿತ್ರಗಳು ಮತ್ತು ಮಾಧ್ಯಮಗಳ ವಿಡಿಯೋ ತುಣುಕುಗಳ ಮೂಲಕ, ಹಿಂಸಾಕೃತ್ಯಗಳಲ್ಲಿ ಭಾಗಿಯಾಗಿದ್ದ 103 ಮಂದಿಯನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಪೇದೆ ಮಂಜುನಾಥ್ ಮಲ್ಲಾಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಬಂಧಿಸಲ್ಪಟ್ಟಿರುವ ವ್ಯಕ್ತಿಗಳಲ್ಲಿ 20ಮಂದಿ, ಈಗಾಗಲೇ ವಿವಿಧ ಅಪರಾಧ ಪ್ರಕರಣಗಳಲ್ಲಿ ಗುರ್ತಿಸಿಕೊಂಡಿದ್ದವರು ಎಂದು ಅಜಯಕುಮಾರ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್