Don't Miss!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ. ವಿಷ್ಣುವರ್ಧನ್ಗೆ ಮೈಸೂರಿನಲ್ಲಿ ಶಸ್ತ್ರಚಿಕಿತ್ಸೆ
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಪ್ರಸ್ತುತ ಮೈಸೂರಿನ ಕಿಂಗ್ ಕೋರ್ಟ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವಿಷ್ಣು ಬದುಕಿನಲ್ಲಿನ ಅನಾರೋಗ್ಯ ಪರ್ವ ಸದ್ದಿಲ್ಲದೇ, ಸುಖಾಂತವಾಗಿದೆ.
ಅವರ ದೇಹದ ಎಡ ಭಾಗದಲ್ಲಿ ಸಂಗ್ರಹವಾಗಿದ್ದ ನೀರನ್ನು ಮೈಸೂರಿನ ವಿಕ್ರಮ್ ಆಸ್ಪತ್ರೆಯ ವೈದ್ಯರ ತಂಡ, ಕಳೆದ ಶನಿವಾರ(ಜು.1)ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದೆ. ಹೀಗಾಗಿ ಅವರಿಗೆ ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ವಿಷ್ಣು ತಂಗಿರುವ ಕಿಂಗ್ ಕೋರ್ಟ್ ಹೋಟೆಲ್ ಕೊಠಡಿ, ಆಸ್ಪತ್ರೆಯಾಗಿ ಪರಿವರ್ತನೆಯಾಗಿದೆ. ತಮ್ಮ ಪತ್ನಿ ಭಾರತಿ ಮತ್ತು ಬಂಧುಮಿತ್ರರ ಆರೈಕೆಯಲ್ಲಿ ವಿಷ್ಣು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮುಂದಿನ ಹದಿನೈದು ದಿನ ಅವರು ಹಾಸಿಗೆ ಬಿಡುವಂತಿಲ್ಲ.
ಅನಾರೋಗ್ಯದ ವಿವರ : ರಾಕ್ಲೈನ್ ವೆಂಕಟೇಶ್ ನಿರ್ಮಾಣದ, ಎಸ್.ನಾರಾಯಣ್ ನಿರ್ದೇಶನದ ‘ಸಿರಿವಂತ’ ಚಿತ್ರದ ಚಿತ್ರೀಕರಣದಲ್ಲಿ ಅವರು ಕಳೆದ ವಾರ ಪಾಲ್ಗೊಂಡಿದ್ದರು. ಏಕಾಏಕಿ ಅವರನ್ನು ಕಾಡಿದ ಅನಾರೋಗ್ಯದಿಂದಾಗಿ ಚಿತ್ರೀಕರಣವನ್ನು ವಿಷ್ಣು ರದ್ದುಪಡಿಸಿದರು. ನಂತರ ಮೈಸೂರಿನ ವಿಕ್ರಮ್ ಆಸ್ಪತ್ರೆ(ಈ ಆಸ್ಪತ್ರೆಯ ಟ್ರಸ್ಟಿಗಳಲ್ಲಿ ವಿಷ್ಣು ಸಹಾ ಒಬ್ಬರು)ಗೆ ಅವರು ಕೂಡಲೇ ದಾಖಲಾದರು.
ವಿವಿಧ ವೈದ್ಯಕೀಯ ಪರೀಕ್ಷೆಗಳ ಮೂಲಕ ದೇಹದೊಳಗಿನ ನೀರನ್ನು ವೈದ್ಯರು ಪತ್ತೆ ಹಚ್ಚಿದರು. ಈ ತೊಂದರೆಯಿಂದಾಗಿ ವಿಷ್ಣು ತೂಕ 75ರಿಂದ 85 ಕೆ.ಜಿಗೆ ಹೆಚ್ಚಳವಾಗಿದ್ದ ಅಂಶ ಬೆಳಕಿಗೆ ಬಂತು. ಶಸ್ತ್ರಚಿಕಿತ್ಸೆ ಮೂಲಕ ವಿಷ್ಣು ಅವರ ಸಮಸ್ಯೆಯನ್ನು ವೈದ್ಯರ ತಂಡ ನೀಗಿಸಿದೆ.
ಎಲ್ಲವೂ ಸುಖಾಂತವಾಗಿ ಮುಗಿದಿದೆ. ವಿಷ್ಣು ಆರೋಗ್ಯ ಬೇಗ ಸುಧಾರಿಸಲಿ... ಸಾಹಸಸಿಂಹ ಮತ್ತೆ ಬೆಳ್ಳಿತೆರೆ ಮೇಲೆ ಘರ್ಷಿಸಲಿ ಎಂದು ದಟ್ಸ್ ಕನ್ನಡ ಹಾರೈಸುತ್ತಿದೆ.
ಮುಖಪುಟ / ಸ್ಯಾಂಡಲ್ವುಡ್