Don't Miss!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುಗ'ದ ಗೆಲುವಿನಿಂದ ಬದಲಾದ ವಿಜಯ್ ದುನಿಯಾ!
ಬೆಂಗಳೂರು, ನ.04: ಬಹಳ ದಿನಗಳ ನಂತರ ನಟ ವಿಜಯ್ ಮುಖದಲ್ಲಿ ಮತ್ತೆ ಮಂದಹಾಸ ಮಿನುಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒಂದು ವರ್ಷ ಚಿತ್ರರಂಗದಿಂದ ನಿಷೇಧಿಸಿತ್ತು . ಈ ಮಧ್ಯೆ ಅವರು ನಟಿಸಿದ 'ಯುಗ" ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸುತ್ತಿದೆ.
'ಯುಗ" ಏನಾಗುತ್ತದೋ ಏನೋ ಎಂಬ ಆತಂಕದಲ್ಲಿದ್ದ ವಿಜಯ್ ಕೊನೆಗೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾನೆ. ಕಾರಣ 'ಯುಗ" ಚಿತ್ರಕ್ಕೆ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿದ ಪ್ರೇಕ್ಷಕರ ಬಾಯಲ್ಲಿ ಚೆನ್ನಾಗಿದೆ ಅನ್ನುವ ಮಾತು ಕೇಳಿಬರುತ್ತಿದೆ.
ಚಿತ್ರವನ್ನು ಎಲ್ಲರೂ ಮೆಚ್ಚಿ ಬೆನ್ನುತಟ್ಟಿದ್ದಾರೆ. ಇಷ್ಟು ದಿನ ನಾವು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದೆ. ಪ್ರೇಕ್ಷಕರು ಒಪ್ಪಿದ ಮೇಲೆ ಕಲಾವಿದನಿಗೆ ಇದಕ್ಕಿಂತಲೂ ಇನ್ನೇನು ಬೇಕು? ಎಂದು ಕೇಳುವ ಮೂಲಕ ಪ್ರತ್ಯಕ್ಷವಾಗಿಯೊ ಪರೋಕ್ಷವಾಗಿಯೋ ನಾರಾಯಣ್ಗೆ ತಕ್ಕ ಉತ್ತರ ಕೊಟ್ಟಿದ್ದಾನೆ. ವಿಜಯ್ಗೆ ಚಿತ್ರರಂಗದಿಂದ ನಿಷೇಧ ಹೇರಿದ್ದಕ್ಕೆ ಜನ ಸಾಮಾನ್ಯರು ಕೂಡಾ ಖೇದ ವ್ಯಕ್ತಪಡಿಸಿದ್ದರು.
ಯಾವುದೇ ಗಾಡ್ ಫಾದರ್ ಇಲ್ಲದ. ಹೀರೋಗೆ ಬೇಕಾದ ಯಾವುದೇ ಅಳತೆಗೋಲುಗಳಿಲ್ಲದ ಪ್ರತಿಭಾವಂತ ನಟನಿಗೆ ಗಾಂಧಿನಗರ ನಿಷೇಧ ಹೇರಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಪ್ರೇಕ್ಷಕ ಪ್ರಭು ಬೆನ್ನ ಹಿಂದಿದ್ದರೆ ಈ ರೀತಿಯ ವಿಜಯಗಳು ವಿಜಯ್ಗೆ ದಕ್ಕುತ್ತಲೇ ಇರುತ್ತವೆ.
(ದಟ್ಸ್ಕನ್ನಡ ಸಿನಿವಾರ್ತೆ)