twitter
    For Quick Alerts
    ALLOW NOTIFICATIONS  
    For Daily Alerts

    ದರ್ಶನ್ ಜಾಮೀನು ಅರ್ಜಿ ಅ.7ಕ್ಕೆ ಮುಂದೂಡಿಕೆ

    By Rajendra
    |

    Darshan bail plea adjourned to Oct 7
    ನಟ ದರ್ಶನ್ ಜಾಮೀನು ಅರ್ಜಿಯನ್ನು ಇಂದು (ಅ.4) ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಅ.7ಕ್ಕೆ ಮುಂದೂಡಿದೆ. ಸೆ.8ರಿಂದ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಇನ್ನೂ ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೆ ಇರಬೇಕಾಗುತ್ತದೆ.

    ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಇಂದು 10.15ಕ್ಕೆ ಹೈಕೋರ್ಟ್‌ಗೆ ಹಾಜರಾಗಿ ತಮ್ಮ ಅಹವಾಲನ್ನು ಸಲ್ಲಿಸಿದರು. ವೈಯಕ್ತಿಕ ಕಾರಣಕ್ಕೆ ದರ್ಶನ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿರಲಿಲ್ಲ. ಇದು ಅವರ ಕೌಟುಂಬಿಕ ಸಮಸ್ಯೆ. ಹಾಗಾಗಿ ಜಾಮೀನು ಮಂಚೂರು ಮಾಡುವಂತೆ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲ ವೆಂಕಟರೆಡ್ಡಿ ಮನವಿ ಮಾಡಿದರು.

    ಹೈಕೋರ್ಟ್ ವಿಚಾರಣೆಯನ್ನು ಅ.7ಕ್ಕೆ ಮುಂದೂಡಿದೆ. ಏತನ್ಮಧ್ಯೆ ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಲು ಮತ್ತೆ ಕಾಲಾವಕಾಶ ಕೋರಿದ್ದಾರೆ. ಈ ಸಂದರ್ಭದಲ್ಲಿ ವಿಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್, ದರ್ಶನ್ ಸಹೋದರ ದಿನಕರ್ ತೂಗುದೀಪ ಹಾಜರಿದ್ದರು. (ಒನ್‌ಇಂಡಿಯಾ ಕನ್ನಡ ಸಿನಿವಾರ್ತೆ)

    English summary
    Karnataka high court on Thursday adjourned to October 7 the bail application of popular Kannada actor, Darshan, who was arrested for allegedly assaulting and threatening his wife.
    Tuesday, October 4, 2011, 12:00
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X