Don't Miss!
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೆ ದಿಗಂತ್ ಪಾನಿಪುರಿಗೆ ಮಸಾಲೆ ಬೀಳಲಿದೆ
ಕರಣ್ ರಚನೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತಿರುವ 'ಪಾನಿಪುರಿ ಚಿತ್ರದ ಚಿತ್ರೀಕರಣ ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿದೆ. ಚಿತ್ರದ ನಾಯಕನಾಗಿ ದಿಗಂತ್ ಅಭಿನಯಿಸುತ್ತಿದ್ದಾರೆ. ದಿಗಂತ್ 'ಪಂಚರಂಗಿ' ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸುತ್ತಿರುವುದರಿಂದ ನಮ್ಮ ಚಿತ್ರ ಆರಂಭವಾಗುವುದು ಸ್ವಲ್ಪ ತಡವಾಯಿತೆಂದು ನಿರ್ಮಾಪಕ ಗೂಡುರು ವೆಂಕಟೇಶ್ವರಲು ತಿಳಿಸಿದ್ದಾರೆ.
ರವಿಚಂದ್ರನ್ ಅವರು ನಟಿಸಿದ 'ಕನಸುಗಾರ' ಚಿತ್ರವನ್ನು ನಿರ್ದೇಶಿಸಿ ಕರಣ್ ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಪಡೆದಿದರು. ಈ ಚಿತ್ರ ಕೂಡ ಸದಭಿರುಚಿ ಚಿತ್ರವಾಗಿ ಹೊರಹೊಮ್ಮುವುದರಲ್ಲಿ ಯಾವುದೇ ಸಂದೇಹವಿಲ್ಲ ಎನ್ನುತ್ತಾರೆ ನಿರ್ದೇಶಕರು. ನಾಯಕಿ ಸೇರಿದಂತೆ ಎಲ್ಲಾ ಕಲಾವಿದರ ಮತ್ತು ತಂತ್ರಜ್ಞರ ಆಯ್ಕೆ ಪ್ರಗತಿಯಲ್ಲಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಹೈದರಾಬಾದ್ ಗಳಲ್ಲಿ ಭಾಸ್ಕರ್ ಛಾಯಾಗ್ರಹಣದಲ್ಲಿ ಪಾನಿಪುರಿ ಚಿತ್ರೀಕರಣ ನಡೆಯಲಿದೆ. ಮೂರು ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಿಸಲಾಗುತ್ತದೆ. ಪಾನಿಪುರಿಗೆ ಮಸಾಲೆ ಕೊರೆತೆ ಇರುವ ಕಾರಣ ಸದ್ಯಕ್ಕೆ ನಾಯ್ಕಿ ಸಿಕ್ಕಿಲ್ಲ.