Don't Miss!
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು-ಹೈದರಾಬಾದ್ನಲ್ಲಿ ‘ಕಾಂಟ್ರಾಕ್ಟ್‘
ಶೈಲಜಾ ಕ್ರಿಯೇಷನ್ಸ್ ಲಾಂಛನದಲ್ಲಿ ಆರ್.ರಾಮಚಂದ್ರ ರಾಜು ನಿರ್ಮಿಸುತ್ತಿರುವ 'ಕಾಂಟ್ರಾಕ್ಟ್" ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಇದೇ ತಿಂಗಳ ಹದಿನೈದರಿಂದ ಆರಂಭವಾಗಲಿದೆ. ಮೈಸೂರು, ಹೈದರಾಬಾದ್ ,ಮಲೇಷಿಯಾ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಪ್ರೀತಿ ಪ್ರೇಮ, ನೋವು ನಲಿವು ಹಾಗೂ ಸಾಹಸಭರಿತ ದೃಶ್ಯಗಳನ್ನು ಚಿತ್ರ ಹೊಂದಿರುತ್ತದೆ ಎಂದು ನಿರ್ದೇಶಕ ಸಮೀರ್ ಹೇಳುತ್ತಾರೆ. ತೆಲುಗು ನಟ ನಿರ್ದೇಶಕ ಜೆಡಿ ಚಕ್ರವರ್ತಿ ಅವರ ಹಲವು ಸಿನಿಮಾಗಳಿಗೆ ಸಹಾಯಕರಾಗಿ ದುಡಿದ ಅನುಭವವಿರುವ ಸಮೀರ್ ಗೆ ಕನ್ನಡದಲ್ಲಿ ಇದು ಮೊದಲ ಪ್ರಯತ್ನ.
ಎಸ್.ಎಸ್.ಸಮೀರ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಅರ್ಜುನ್ಸರ್ಜಾ ಹಾಗೂ ತೆಲುಗಿನ ಜೆ.ಡಿ.ಚಕ್ರವರ್ತಿ ಅಭಿನಯಿಸುತ್ತಿದ್ದಾರೆ. ಬಾಲಿವುಡ್ ಬೆಡಗಿ ಮಿನೀಷ ಲಂಬಾಬ ಈ ಚಿತ್ರದ ನಾಯಕಿ. ಮಲ್ಲಿಕಾ ಶರಾವತ್ 'ಕಾಂಟ್ರಾಕ್ಟ್"ನ ಒಂದು ಗೀತೆಗೆ ಹೆಜ್ಜೆ ಹಾಕಲಿದ್ದಾರೆ. ಉದ್ಯಮಿ ಪಾತ್ರದಲ್ಲಿ ಅರ್ಜುನ್ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಕಾಟ ಕೊಡುವ ವಿಲನ್ ಆಗಿ ಜೆಡಿ ಚಕ್ರವರ್ತಿ ಕಾಣಿಸಿಕೊಳ್ಳಲಿದ್ದಾರೆ.
ಅನ್ವೇಶ್, ರಂಗಾಯಣರಘು, ಸಾಧುಕೋಕಿಲಾ, ಕೋಟ ಶ್ರೀನಿವಾಸ್ರಾವ್, ಶರಣ್, ರಮೇಶ್ಭಟ್, ಕಾಶಿ, ರಾಜು ತಾಳಿಕೋಟೆ ಮುಂತಾದವ ಹಿರಿಯ ಕಿರಿಯ ತಾರಾಬಳಗದೊಂದಿಗೆ ಈ ಚಿತ್ರ ಸುಂದರ ಕೌಟುಂಬಿಕ ಚಿತ್ರವಾಗಲಿದೆ ಎಂಬ ನಂಬಿಕೆಯನ್ನು ಸಮೀರ್ ಇಟ್ಟುಕೊಂಡಿದ್ದಾರೆ. ಸುಭಾಷ್-ವಿಶ್ವಾಸ್ ಸಂಗೀತ, ಅತ್ತಿಗಿರಿ ವೆಂಕಿ ಗೀತರಚನೆಗೆ ಅರ್ಜುನ್ ಮಿನಿಷಾ ಹೆಜ್ಜೆ ಹಾಕಲಿದ್ದಾರೆ. ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ.
ಶ್ರೀಮಂಜುನಾಥ ನಂತರ ಮತ್ತೆ ದ್ವಿಭಾಷಾ ಚಿತ್ರ ಸೂತ್ರ ಹಿಡಿದುಕೊಂಡು ಬಂದಿರುವ ಅರ್ಜುನ್ ಸರ್ಜಾ ಮತ್ತೊಮ್ಮೆ ಕನ್ನಡದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಸೋದರಳಿಯ ಚಿರು ಬೆಳವಣಿಗೆಗೂ ಪ್ರೋತ್ಸಾಹಿಸುತ್ತಿದ್ದಾರೆ.