Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಲಾ ತಪಸ್ವಿ ರಾಜೇಶ್ಗೆ ಕನ್ನಡ ವಿವಿ ಗೌರವ ಡಾಕ್ಟರೇಟ್
ಜನವರಿಯಲ್ಲೇ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ ಎಂದು ವಿವಿ ಮೂಲಗಳು ತಿಳಿಸಿವೆ. ಅರುವತ್ತು ಮತ್ತು ಎಪ್ಪತ್ತರ ದಶಕದಲ್ಲಿ ನಟ ರಾಜೇಶ್ ತಮ್ಮದೇ ಆದಂತಹ ವಿಲಕ್ಷಣ ಪಾತ್ರಗಳಿಗೆ ಹೆಸರಾಗಿದ್ದರು. ಇದುವರೆಗೂ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ರಾಜೇಶ್ ಪೋಷಿಸಿದ್ದಾರೆ.
ರಾಜೇಶ್ ತಮ್ಮ ಆತ್ಮಕತೆಗೆ 'ಕಲಾ ತಪಸ್ವಿ ರಾಜೇಶ್ ಆತ್ಮಕಥೆ' ಎಂದು ಹೆಸರಿಟ್ಟಿದ್ದಾರೆ. ಹುಣಸೂರು ಕೃಷ್ಣಮೂರ್ತಿ ಅವರು ರಾಜೇಶ್ ಅವರನ್ನು 'ವೀರ ಸಂಕಲ್ಪ' ಚಿತ್ರದ ಮೂಲಕ ಕನ್ನಡ ಬೆಳ್ಳಿಪರದೆಗೆ ಪರಿಚಯಿಸಿದರು. ಅಭಿನಯದ ಜೊತೆಗೆ ಸುಶ್ರಾವ್ಯವಾಗಿ ರಾಜೇಶ್ ಹಾಡಬಲ್ಲರು. ಉದಯ ಕುಮಾರ್, ರಾಜ್ಕುಮಾರ್ ಮತ್ತು ಕಲ್ಯಾಣ್ ಕುಮಾರ್ ತ್ರಯರಿಗೆ ರಾಜೇಶ್ ಚಿತ್ರಗಳು ಪ್ರಬಲ ಸ್ಪರ್ಧೆ ನೀಡಿತ್ತಿದ್ದದ್ದು ವಿಶೇಷ.
1968ರಲ್ಲಿ ಸಿ ವಿ ಶಿವಶಂಕರ್ ನಿರ್ದೇಶನದಲ್ಲಿ ಬಂದಂತಹ 'ನಮ್ಮ ಊರು' ಚಿತ್ರಕ್ಕೆ ಅಂದಿನ ಹಣಕಾಸು ಸಚಿವರಾಗಿದ್ದ ರಾಮಕೃಷ್ಣ ಹೆಗಡೆ ಅವರು ಶೇ.100ರಷ್ಟು ತೆರಿಗೆ ವಿನಾಯಿತಿ ನೀಡಿದ್ದರು. ಬೆಳುವಲದ ಮಡಿಲಲ್ಲಿ, ಕಲಿಯುಗ, ಪಿತಾಮಹ, ಸತ್ಯನಾರಾಯಣ ಪೂಜಾ ಫಲ, ಕರ್ಣ ಚಿತ್ರಗಳು ರಾಜೇಶ್ ಅವರಿಗೆ ಹೆಸರು ತಂದಂತಹ ಚಿತ್ರಗಳು. (ಒನ್ಇಂಡಿಯಾ ಕನ್ನಡ)