Don't Miss!
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ಮತ್ತೆ ಬಂದ ಬಂಗಾರದ ಜಿಂಕೆ ನಿಕೇಶಾ ಪಟೇಲ್
ಕನ್ನಡದ ಬೆಳ್ಳಿಪರದೆಗೆ ನಿಕೇಶಾ ಪಟೇಲ್ ಎಂಬ ಬಂಗಾರದ ಜಿಂಕೆ ಮತ್ತೆ ಬಂದಿದ್ದಾಳೆ. ಮಾಡೆಲಿಂಗ್ ಜಗತ್ತಿನಲ್ಲಿ ಒಂದು ಕೈ ನೋಡಿರುವ ಈಕೆ ತೆಲುಗಿನಲ್ಲೂ ಅದೃಷ್ಟ ಪರೀಕ್ಷಿಸಿಕೊಂಡಿದ್ದಾಳೆ. ಈಗಾಗಲೆ ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ 'ನರಸಿಂಹ' ಚಿತ್ರದಲ್ಲಿ ಅಭಿನಯಿಸುತ್ತಿರುವ ನಿಕೇಶಾ ಮತ್ತೊಂದು ಕನ್ನಡ ಚಿತ್ರಕ್ಕೆ ಸಹಿಹಾಕಿದ್ದಾರೆ.
ಚಿರಂಜೀವಿ ಸರ್ಜಾ ಮುಖ್ಯಭೂಮಿಕೆಯಲ್ಲಿರುವ 'ವರದನಾಯಕ' ಚಿತ್ರಕ್ಕೆ ನಿಕೇಶಾ ಬಂದಿದ್ದಾರೆ. ಇದು ಆಕೆ ಅಭಿನಯದ ಎರಡನೆ ಕನ್ನಡ ಚಿತ್ರ. 'ವರದನಾಯಕ' ಚಿತ್ರ ಬಹುತಾರಾಗಣದ ಭಾರಿ ಬಜೆಟ್ ಚಿತ್ರ. ಸುದೀಪ್, ಅರ್ಜುನ್ ಸರ್ಜಾ ಹಾಗೂ ಸಾಯಿ ಕುಮಾರ್ ಚಿತ್ರದ ತಾರಾಗಣದಲ್ಲಿದ್ದಾರೆ.
ಶಂಕರೇಗೌಡ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಅಯ್ಯಪ್ಪ ಶರ್ಮ. ಸುದೀಪ್ ಪ್ರಿಯಮಣಿಯಾಗಿ ಪ್ರಿಯಾಮಣಿ ಚಿತ್ರದಲ್ಲಿ ಕಾಣಿಸಲಿದ್ದಾರೆ. ತೆಲುಗಿನ 'ಲಕ್ಷ್ಯಂ' ಚಿತ್ರದ ರೀಮೇಕ್ ಇದಾಗಿದ್ದು, ಕನ್ನಡದ ನೇಟಿವಿಟಿಗೆ ತಕ್ಕಂತೆ ತೆರೆಗೆ ತರಲಾಗುತ್ತದೆ ಎನ್ನುತ್ತಾರೆ ಚಿತ್ರದ ನಿರ್ಮಾಪಕ. (ದಟ್ಸ್ಕನ್ನಡ ಸಿನಿವಾರ್ತೆ)