Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರ್ ಅಶೋಕ್ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು
ಮಲ್ಲೇಶ್ವರದ ಮಂತ್ರಿ ಮಾಲ್ ಸೇರಿದಂತೆ ಲಿಡೋ (ಹಲಸೂರು), ಗರುಡಾ ಮಾಲ್, ವಿಷನ್ ಸಿನಿಮಾಸ್, ಶಂಕರನಾಗ್, ಪಿವಿಆರ್ (ಕೋರಮಂಗಲ) ಚಿತ್ರಮಂದಿರಗಳಲ್ಲಿ ಪರಭಾಷಾ ಚಿತ್ರಗಳ ಪ್ರದರ್ಶನ ನಿರಾತಂಕವಾಗಿ ನಡೆಯುತ್ತಿದೆ ಎಂದು 'ವಿಜಯ ಕರ್ನಾಟಕ' ಉದ್ದದ ಪಟ್ಟಿ ನೀಡಿದೆ.
ಫೆಬ್ರವರಿ 4, 5 ಮತ್ತು 6ರಂದು ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಲು ಸೂಚಿಸಲಾಗುವುದು ಎಂದು ಸಚಿವ ಆರ್ ಅಶೋಕ್ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಸಂತಕುಮಾರ್ ಗುಡುಗಿದ್ದರು. ಆದರೆ ಅವರ ಸೂಚನೆಯನ್ನು ಚಿತ್ರಮಂದಿರದ ಮಾಲೀಕರು ಗಾಳಿಗೆ ತೂರಿದ್ದಾರೆ.
ನಾರಾಯಣ ಗೌಡ ಎಚ್ಚರಿಕೆ: ಕೆಲವು ಚಿತ್ರಮಂದಿರಗಳು ಅನ್ಯಭಾಷಾ ಚಿತ್ರಗಳನ್ನು ಪ್ರದರ್ಶಿಸುತ್ತಿವೆ. ಸಾಹಿತ್ಯ ಸಮ್ಮೇಳನ ಜಾತ್ರೆ ಮುಗಿಯುವವರೆ ಕನ್ನಡ ಚಿತ್ರಗಳನ್ನು ಪ್ರದರ್ಶಿಸದಿದ್ದರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ಚಿತ್ರಮಂದಿರದ ಮಾಲೀಕರಿಗೆ ಕರವೇರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಸಿದ್ದಾರೆ.
ಸಮ್ಮೇಳನದ ಆರಂಭದಿಂದಲೇ ಕೆಲವು ಚಿತ್ರಮಂದಿರಗಳಲ್ಲಿ ಅನ್ಯಭಾಷೆಯ ಚಿತ್ರಗಳು ತೆರೆಕಂಡಿದ್ದು, ತಮ್ಮ ಗಮನಕ್ಕೆ ಬಂದಿದೆ. ಮತ್ತೆ ಅನ್ಯಭಾಷೆಯ ಚಿತ್ರಗಳನ್ನು ಪ್ರದರ್ಶಿಸಿದ್ದು ನಮ್ಮ ಗಮನಕ್ಕೆ ಬಂದರೆ, ಮುಂದೆ ಆಗಬಹುದಾದ ಅನಾಹುತಕ್ಕೆ ರಕ್ಷಣಾ ವೇದಿಕೆ ಹೊಣೆಯಲ್ಲ ಎಂದಿದ್ದಾರೆ.