Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರ್ ಅಶೋಕ್ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು
ಮಲ್ಲೇಶ್ವರದ ಮಂತ್ರಿ ಮಾಲ್ ಸೇರಿದಂತೆ ಲಿಡೋ (ಹಲಸೂರು), ಗರುಡಾ ಮಾಲ್, ವಿಷನ್ ಸಿನಿಮಾಸ್, ಶಂಕರನಾಗ್, ಪಿವಿಆರ್ (ಕೋರಮಂಗಲ) ಚಿತ್ರಮಂದಿರಗಳಲ್ಲಿ ಪರಭಾಷಾ ಚಿತ್ರಗಳ ಪ್ರದರ್ಶನ ನಿರಾತಂಕವಾಗಿ ನಡೆಯುತ್ತಿದೆ ಎಂದು 'ವಿಜಯ ಕರ್ನಾಟಕ' ಉದ್ದದ ಪಟ್ಟಿ ನೀಡಿದೆ.
ಫೆಬ್ರವರಿ 4, 5 ಮತ್ತು 6ರಂದು ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಲು ಸೂಚಿಸಲಾಗುವುದು ಎಂದು ಸಚಿವ ಆರ್ ಅಶೋಕ್ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಸಂತಕುಮಾರ್ ಗುಡುಗಿದ್ದರು. ಆದರೆ ಅವರ ಸೂಚನೆಯನ್ನು ಚಿತ್ರಮಂದಿರದ ಮಾಲೀಕರು ಗಾಳಿಗೆ ತೂರಿದ್ದಾರೆ.
ನಾರಾಯಣ ಗೌಡ ಎಚ್ಚರಿಕೆ: ಕೆಲವು ಚಿತ್ರಮಂದಿರಗಳು ಅನ್ಯಭಾಷಾ ಚಿತ್ರಗಳನ್ನು ಪ್ರದರ್ಶಿಸುತ್ತಿವೆ. ಸಾಹಿತ್ಯ ಸಮ್ಮೇಳನ ಜಾತ್ರೆ ಮುಗಿಯುವವರೆ ಕನ್ನಡ ಚಿತ್ರಗಳನ್ನು ಪ್ರದರ್ಶಿಸದಿದ್ದರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ಚಿತ್ರಮಂದಿರದ ಮಾಲೀಕರಿಗೆ ಕರವೇರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಸಿದ್ದಾರೆ.
ಸಮ್ಮೇಳನದ ಆರಂಭದಿಂದಲೇ ಕೆಲವು ಚಿತ್ರಮಂದಿರಗಳಲ್ಲಿ ಅನ್ಯಭಾಷೆಯ ಚಿತ್ರಗಳು ತೆರೆಕಂಡಿದ್ದು, ತಮ್ಮ ಗಮನಕ್ಕೆ ಬಂದಿದೆ. ಮತ್ತೆ ಅನ್ಯಭಾಷೆಯ ಚಿತ್ರಗಳನ್ನು ಪ್ರದರ್ಶಿಸಿದ್ದು ನಮ್ಮ ಗಮನಕ್ಕೆ ಬಂದರೆ, ಮುಂದೆ ಆಗಬಹುದಾದ ಅನಾಹುತಕ್ಕೆ ರಕ್ಷಣಾ ವೇದಿಕೆ ಹೊಣೆಯಲ್ಲ ಎಂದಿದ್ದಾರೆ.