Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ವಾರದಲ್ಲಿ ಎರಡನೇ ಬಾರಿ ರಜನಿ ಆಸ್ಪತ್ರೆಗೆ
ಒಂದೇ ವಾರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಎರಡನೇ ಬಾರಿ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುಪ್ಪುಸದಲ್ಲಿ ಆಗಿರುವ ಸೋಂಕು ಮತ್ತು ವಿಪರೀತ ಜ್ವರವಿರುವ ಕಾರಣ ಅವರನ್ನು ಬುಧವಾರ ರಾತ್ರಿ ಇಸಾಬೆಲ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಎರಡು ದಿನ ತುರ್ತು ನಿಗಾ ಘಟಕದಲ್ಲಿ ಇರಿಸಲಾಗುತ್ತಿದೆ.
ಕಳೆದ ಶುಕ್ರವಾರ, ಏಪ್ರಿಲ್ 29ರಂದು ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಪರೀತ ಸುಸ್ತು ಮತ್ತು ಡಿಹೈಡ್ರೇಷನ್ ಇದ್ದ ಅವರಿಗೆ ಚಿಕಿತ್ಸೆ ನೀಡಿ ಒಂದೇ ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಒಂದೇ ವಾರದಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಲ್ಲಿ ಕಳವಳ ಮೂಡಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕೆಲ ಅಭಿಮಾನಿಗಳು ಆಸ್ಪತ್ರೆಯ ಎದಿರು ಜಮಾಯಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಅವರನ್ನು ಎರಡು ದಿನ ತುರ್ತು ನಿಗಾ ಘಟಕದಲ್ಲಿ ಇರಸಲಾಗುತ್ತಿದೆಯಾದರೂ 60 ವರ್ಷದ ಸೂಪರ್ ಸ್ಟಾರ್ ಆರೋಗ್ಯ ಸ್ಥಿತಿ ಸಮತೋಲನದಲ್ಲಿದೆ. ಯಾವುದೇ ಆತಂತಕ್ಕೆ ಕಾರಣವಿಲ್ಲ ಎಂದು ಆಸ್ಪತ್ರೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ರಜನಿಕಾಂತ್ ಅವರಿಗೆ ವಿಶ್ರಾಂತಿಯ ಅವಶ್ಯಕತೆಯಿದ್ದರಿಂದ ಅಭಿಮಾನಿಗಳು ಆಸ್ಪತ್ರೆಯ ಎದಿರು ಬಂದು ತೊಂದರೆ ಕೊಡಬಾರದೆಂದು ಅವರ ಕುಟುಂಬದವರು ಆಗ್ರಹಿಸಿದ್ದಾರೆ.
ರಜನಿಕಾಂತ್ ಅವರ ಹೊಸ ಚಿತ್ರ ರಾಣಾ ಸೆಟ್ ಏರಿದ ದಿನವೇ ಅವರು ಮೊದಲ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ತ್ರಿಪಾತ್ರದಲ್ಲಿ ಅಭಿನಯಿಸುತ್ತಿರುವ ಅವರ ಜೊತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಅಸಿನ್ ಮತ್ತು ಅನುಷ್ಕಾ ಶೆಟ್ಟಿ ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ.