Don't Miss!
- News ‘ಮೋದಿಯನ್ನು ಬಾಯಿಗೆ ಬಂದ ಹಾಗೆ ಬೈದ ದೇವೇಗೌಡ್ರು ಈಗ ಅಪ್ಪಿಕೊಳ್ಳುವುದು ಎಂದರೆ ಏನರ್ಥ?’
- Lifestyle ಹೌಸ್ವೈಫ್ ಆಗಿರುವ ಈ ಮಹಿಳೆ ದಿನದಲ್ಲಿ 2 ಗಂಟೆ ಕೆಲಸ ಮಾಡಿ ಲಕ್ಷ ಗಳಿಸುತ್ತಿದ್ದಾರಂತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Automobiles ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್, ನಾರಾಯಣ್ 'ವೀರ ಪರಂಪರೆ'ಆರಂಭ
ಸುದೀಪ್ ಮುಖ್ಯಭೂಮಿಕೆಯಲ್ಲಿರುವ 'ವೀರ ಪರಂಪರೆ' ಚಿತ್ರಕ್ಕೆ ಶುಕ್ರವಾರ (ಮಾ.5) ಮುಂಜಾನೆ ಪೂಜಾ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಯಿತು. ಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಎಸ್ ನಾರಾಯಣ್ ಅವರ ಬಸವೇಶ್ವರ ನಿವಾಸದಲ್ಲಿ ಇಂದು ಮುಂಜಾನೆ 5.30ರ ಶುಭ ಗಳಿಗೆಯಲ್ಲಿ ಪೂಜೆ ನಡೆಯಿತು. ಸುದೀಪ್ ಅವರ ತಾಯಿ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಲಾಯಿತು.
ಸದ್ಯಕ್ಕೆ ಶಂಕರೇಗೌಡ ನಿರ್ಮಿಸಿ ಸುದೀಪ್ ನಿರ್ದೇಶಿಸುತ್ತಿರುವ 'ದಂಡಂ ದಶಗುಣಂ 'ಚಿತ್ರೀಕರಣ ನಡೆಯುತ್ತಿದೆ. ಅದಾದ ಕೂಡಲೆ ಏಪ್ರಿಲ್ 2ರಿಂದ 'ವೀರ ಪರಂಪರೆ' ರೆಗ್ಯುಲರ್ ಚಿತ್ರೀಕರಣ ನಡೆಯಲಿದೆ. ಸುದೀಪ್ ಜೊತೆಗೆ ಎಸ್ ನಾರಾಯಣ್ ಇದೇ ಮೊದಲ ಬಾರಿಗೆ ಮಾಡುತ್ತಿರುವ ಸಾಹಸ, ಸೆಂಟಿಮೆಂಟ್ ಪ್ರಧಾನ ಚಿತ್ರ ಇದಾಗಿದೆ. ಹಾಗಾಗಿ ಸಹಜವಾಗಿಯೇ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮನೆಮಾಡಿದೆ.
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಇದೇ ಮೊದಲ ಬಾರಿಗೆ ಸುದೀಪ್, ಅಂಬರೀಶ್ ಜೊತೆಯಾಗಿ ನಟಿಸುತ್ತಿರುವುದು.'ನನ್ನವಳು ನನ್ನವಳು' ಚಿತ್ರ ಬಂದ ಹತ್ತು ವರ್ಷಗಳ ಬಳಿಕ ಛಾಯಾಗ್ರಾಹಕ ಗಿರಿ ಮತ್ತು ನಾರಾಯಣ್ ಈ ಚಿತ್ರದಲ್ಲಿ ಮತ್ತೆ ಒಂದಾಗುತ್ತಿದ್ದಾರೆ. ಚಿತ್ರದ ನಾಯಕಿಗಾಗಿ ಹುಡುಕಾಟ ನಡೆದಿದೆ.