Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಆಕ್ಷನ್ ಕಟ್ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ
ಈಗಾಗಲೆ ನಟನೆ ಹಾಗೂ ನಿರ್ದೇಶನದಲ್ಲಿ ಗೆದ್ದಿರುವ ನಲ್ಲ ಸುದೀಪ್ ಈಗ ಮತ್ತೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಸಿದ್ಧತೆ ನಡೆಸಿದ್ದಾರೆ. ಆದರೆ ಈ ಬಾರಿ ಅವರು ಆಕ್ಷನ್ ಕಟ್ ಹೇಳುತ್ತಿರುವುದು ಮತ್ತೊಬ್ಬ ನಿರ್ದೇಶಕ ಕಮ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ. ಈ ಚಿತ್ರ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಸೆಟ್ಟೇರಲಿದೆ.
ಸುದೀಪ್ ಜೊತೆ 'ಕೆಂಪೇಗೌಡ' ಹಾಗೂ ಉಪ್ಪಿ ಜೊತೆ 'ಶ್ರೀಮತಿ' ಚಿತ್ರಗಳನ್ನು ನಿರ್ಮಿಸಿರುವ ಶಂಕರೇಗೌಡ ಚಿತ್ರದ ನಿರ್ಮಾಪಕ. ಸದ್ಯಕ್ಕೆ ಉಪ್ಪಿ ಹಾಗೂ ಸುದೀಪ್ ಇಬ್ಬರೂ ಬ್ಯುಸಿಯಾಗಿದ್ದು ಮಾರ್ಚ್ ಬಳಿಕವಷ್ಟೆ ಈ ಮಹತ್ವಾಕಾಂಕ್ಷಿ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಿದ್ದಾರೆ.
ಅತ್ತ ನಿರ್ಮಪಕ ಶಂಕರೇಗೌಡ ಕೂಡ ಶಿವಣ್ಣ ಜೊತೆ ಸಿಎಂ (ಕಾಮನ್ ಮ್ಯಾನ್) ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಉಪ್ಪಿ ಮತ್ತು ಸುದೀಪ್ ಕಾಂಬಿನೇಷನ್ ಚಿತ್ರಕ್ಕೆ ಇನ್ನೂ ಟೈಟಲ್ ಅಂತಿಮವಾಗಿಲ್ಲ. ಚಿತ್ರಕತೆ ಸಂಪೂರ್ಣ ಸಿದ್ಧವಾದ ಬಳಿಕಷ್ಟೆ ಟೈಟಲ್ ನಿರ್ಧಾರವಾಗಲಿದೆ. ಸುದೀಪ್ ಹಾಗೂ ಉಪ್ಪಿ ಇಬ್ಬರೂ ಕೂತು ಪಕ್ಕಾ ಚಿತ್ರಕತೆಯನ್ನು ಹೆಣೆಯುತ್ತಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)