Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್-ಸಿದ್ದು ಸೌಹಾರ್ದಯುತ ಮಾತುಕತೆ
ಬೆಂಗಳೂರು : ಅಹಿಂದ ಸಂಘಟನೆಯ ಹಿಂದೆ ಬಿದ್ದಿರುವ ಜೆಡಿಎಸ್ನ ರೆಬಲ್ ಸ್ಟಾರ್ ಸಿದ್ದರಾಮಯ್ಯ, ಸ್ವಾಮೀಜಿಗಳು ಮತ್ತು ಬುದ್ದಿಜೀವಿಗಳನ್ನು ಇತ್ತೀಚೆಗೆ ಭೇಟಿ ಮಾಡುತ್ತಿದ್ದಾರೆ. ಈ ಬೆನ್ನಲ್ಲಿಯೇ ವರನಟ ಡಾ.ರಾಜ್ಕುಮಾರ್ ನಿವಾಸಕ್ಕೆ ಸಿದ್ದರಾಮಯ್ಯಭೇಟಿ ನೀಡಿ, ರಾಜ್ರೊಂದಿಗೆ ಲೋಕಾಭಿರಾಮವಾಗಿ ಮಾತನಾಡಿದರು.
ಪ್ರೀತಿಯಿಂದ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದ ವರನಟ, ಸಿಹಿ ನೀಡಿದರು. ‘ನಿಮ್ಮ ಕಾಲು ನೋವು ಈಗ ಪರವಾಗಿಲ್ವಾ’ ಎಂದು ಯೋಗಕ್ಷೇಮ ವಿಚಾರಿಸಿದ ಸಿದ್ದರಾಮಯ್ಯ, ತಾವು ಕಬ್ಬಡಿ ಆಡಲು ಹೋಗಿ ಕಾಲು ಮುರಿದುಕೊಂಡ ಕಥೆ ಹೇಳಿದರು.
ಎಂದಿನಂತೆಯೇ ‘ಇವ್ರು ನಮ್ಮ ಕಾಡ್ನೋರು’ ಎಂದು ರಾಜ್ ಆತ್ಮೀಯತೆ ವ್ಯಕ್ತಪಡಿಸಿದರು. ಮಳೆಬೆಳೆ ಕುರಿತು ಇಬ್ಬರೂ ಸ್ವಲ್ಪ ಕಾಲ ಮಾತನಾಡಿದರು. ಅಲ್ಲಿಯೇ ಇದ್ದ ಪುನೀತ್ ರಾಜ್ಕುಮಾರ್, ‘ಜೋಗಿ’ ಚಿತ್ರವನ್ನು ವೀಕ್ಷಿಸುವಂತೆ ಆಹ್ವಾನ ನೀಡಿದರು.
ರಾಜಕೀಯದಿಂದ ಮುಕ್ತವಾಗಿ ಮನಬಿಚ್ಚಿ ಮಾತನಾಡಿದ ಸಿದ್ದರಾಮಯ್ಯ, ರಾಜ್ರ ಸೇವೆ ರಾಜ್ಯಕ್ಕೆ ಮುಂದುವರೆಯಲಿ ಎಂದು ಈ ಸಂದರ್ಭದಲ್ಲಿ ಹಾರೈಸಿದರು.
ಪಾರ್ವತಮ್ಮ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಮತ್ತು ಸಿದ್ದರಾಮಯ್ಯ ಅವರ ಬೆಂಬಲಿಗರು ಈ ಸಂದರ್ಭದಲ್ಲಿ ಹಾಜರಿದ್ದರು. ಮಾತುಕತೆಯ ನಂತರ ಇದೊಂದು ಸೌಹಾರ್ದ ಭೇಟಿ ಎಂದು ಸುದ್ದಿಗಾರರಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್