Don't Miss!
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿ ನಿರ್ಮಾಪಕ ಸಿ.ವಿ.ಎಲ್. ಶಾಸ್ತ್ರಿ ವಿಧಿವಶ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದರು. ಇವರು ಪತ್ನಿ ಮತ್ತು ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗ, ಸ್ನೇಹಿತರನ್ನು ಅಗಲಿದ್ದಾರೆ. ಸದಾಶಿವನಗರದಲ್ಲಿರುವ ಅವರ ಮನೆಯಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಕನ್ನಡ ಚಲನಚಿತ್ರ ಹಂಚಿಕೆದಾರರೂ ಆಗಿದ್ದ 'ಮಾಲ್ಗುಡಿ ಡೇಸ್' ನಿರ್ಮಾಪಕ ಸಿ.ವಿ.ಎಲ್, ದೇಶದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದರು. ಮೂಲತಃ ರಾಮನಗರದವರಾದ ಇವರು ಐವತ್ತರ ದಶಕದಲ್ಲಿ ಬೆಂಗಳೂರಿಗೆ ಬಂದು ನೆಲೆಸಿ ಚಲನ ಚಿತ್ರೋದ್ಯಮದಲ್ಲಿ ತೊಡಗಿಸಿ ಕೊಂಡಿದ್ದವರು.
ಕಳ್ಳಕುಳ್ಳ, ಮಲಯ ಮಾರುತ, ಪಕ್ಕಾ ಕಳ್ಳ, ಹೆಣ್ಣು ಹುಲಿ, ಆಸೆಯ ಬಲೆ ಮುಂತಾದ ಯಶಸ್ವಿ ಚಲನಚಿತ್ರಗಳನ್ನು ನಿರ್ಮಿಸಿದ್ದರು. ಅವರ ನಿರ್ಮಾಣದ ಆತಂಕ ಚಿತ್ರಕ್ಕೆ ಆರು ರಾಜ್ಯ ಪ್ರಶಸ್ತಿಗಳು ಬಂದಿದ್ದವು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು, 'ಮಲಯ ಮಾರುತ' ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. 19 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆದಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಯಶಸ್ಸಿಗೆ ಇವರು ಕಾರಣರಾಗಿದ್ದರು.
ಶಾಸ್ತ್ರಿ ಮೂವೀಸ್, ಶಾಸ್ತ್ರಿ ಸಿನಿ ಆರ್ಟ್ಸ್ ಪ್ರೊಡಕ್ಷನ್ ಸಂಸ್ಥೆಗಳ ಮೂಲಕ ಹಲವು ಕನ್ನಡ ಚಿತ್ರಗಳ ನಿರ್ಮಾಪಕರಾಗಿ, ಹಂಚಿಕೆದಾರರಾಗಿ ಕನ್ನಡ ಚಲನಚಿತ್ರೋದ್ಯಮಕ್ಕೆ ಬಲುದೊಡ್ಡ ಕೊಡುಗೆ ನೀಡಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿದ್ದ ಇವರು ಕರ್ನಾಟಕ ಚಿತ್ರೋದ್ಯಮದ ಬೆಳವಣಿಗೆಗೆ ಬಹಳಷ್ಟು ಕೆಲಸಗಳನ್ನು ಮಾಡಿದ್ದರು. ಎಂಬತ್ತರ ದಶಕದಲ್ಲಿ ಇವರು ರಾಜಕುಮಾರ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.