Don't Miss!
- Lifestyle ಇದೇ ನೋಡಿ ಭಾರತದ ಮೊಟ್ಟ ಮೊದಲು ರೈಲು..! ಇಂದಿಗೆ ಈ ರೈಲು ಹೊರಟು 171 ವರ್ಷ..!
- Finance ಐಪಿಎಲ್ನಲ್ಲಿ ಸಂಚಲನ ಸೃಷ್ಟಿಸುತ್ತಿರುವ ಕಾವ್ಯಾ ಮಾರನ್ ಯಾರು, ಅವರ ಹಿನ್ನೆಲೆ ತಿಳಿಯಿರಿ
- News ಶಾಸಕ ವಸಂತ್ ಆಸ್ನೋಟಿಕರ್ ಶೌಟೌಟ್ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂ
- Automobiles Bengaluru: ಇಂದಿನಿಂದ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ವಾಹನಗಳ ಸಂಚಾರ ಬಂದ್.. ಪರ್ಯಾಯ ಮಾರ್ಗಗಳಾವುವು?
- Technology OnePlus: ಒನ್ಪ್ಲಸ್ 11R ಸೋಲಾರ್ ರೆಡ್ ವೇರಿಯಂಟ್ ಏಪ್ರಿಲ್ 18 ರಿಂದ ಸೇಲ್! ಆಫರ್ ಏನಿದೆ?
- Sports KKR vs RR: ಐಪಿಎಲ್ನ ಶತಕಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ಜೋಸ್ ಬಟ್ಲರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿತೆರೆಗೆ ಅಬಕಾರಿ ಸಚಿವ ರೇಣುಕಾಚಾರ್ಯ ಪದಾರ್ಪಣೆ
ರಾಜಕೀಯವೇ ಒಂಥರಾ ರಂಗಮಂದಿರವಿದ್ದಂತೆ. ಇನ್ನು ರಾಜಕಾರಣಿಗಳು ಬಣ್ಣಿಹಚ್ಚಿದರೆ ಕೇಳಬೇಕೆ. ಲೀಲಾಜಾಲವಾಗಿ ಅಭಿನಯಿಸುವುದರಲ್ಲಿ ಎರಡು ಮಾತಿಲ್ಲ. ಇದನ್ನು ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಅನ್ನಿಸುತ್ತದೆ. ಹಾಗಾಗಿ ಅವರು ಈ ಬಾರಿ ಅಬಕಾರಿ ಸಚಿವ ರೇಣುಕಾಚಾರ್ಯ ಅವರನ್ನು ಕನ್ನಡ ಬೆಳ್ಳಿಪರದೆಗೆ ಪರಿಚಯಿಸುತ್ತಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭೂಲೋಕ ರಕ್ಷಕ ಎಂಬ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿಯೂ ಇದೆ. ಇನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರಂತೂ ಶಿವಕಾಶಿ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈಗ ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಬೆಳ್ಳಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಓಂ ಆಕ್ಷನ್, ಕಟ್ ಹೇಳುತ್ತಿರುವ 'ಭೀಮಾ ತೀರದಲ್ಲಿ' ಚಿತ್ರದಲ್ಲಿ ರೇಣುಕಾಚಾರ್ಯ ಅವರು ಮುಖ್ಯಪಾತ್ರವೊಂದನ್ನು ಪೋಷಿಸಲಿದ್ದಾರೆ.
ಈಗಾಗಲೆ ಯುಗಾದಿ ಹಬ್ಬದ ದಿನ ಚಿತ್ರದ ಮುಹೂರ್ತ ನೆರವೇರಿದ್ದು, ಈ ಚಿತ್ರ ರೇಣುಕಾಚಾರ್ಯ ಅವರ ಚೊಚ್ಚಲ ಚಿತ್ರವಾಗಲಿದೆ ಎಂದು ಓಂ ಪ್ರಕಾಶ್ ತಿಳಿಸಿದ್ದಾರೆ. ಚಿತ್ರದಲ್ಲಿ ಬಣ್ಣ ಹಚ್ಚಿಕೊಳ್ಳಲು ರೇಣುಕಾಚಾರ್ಯ ಒಪ್ಪಿರುವುದಾಗಿ ಓಂ ವಿವರ ನೀಡಿದ್ದಾರೆ. ದುನಿಯಾ ವಿಜಯ್ ಹಾಗೂ ಪ್ರಣೀತಾ ಚಿತ್ರದ ಪ್ರಮುಖ ಪಾತ್ರಧಾರಿಗಳು. ಅಂದಹಾಗೆ ಈ ಚಿತ್ರ ಮೇ ತಿಂಗಳಲ್ಲಿ ಸೆಟ್ಟೇರಲಿದೆ.