Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊಗ್ಗಿನ ಮನಸು ಮತ್ತೊಮ್ಮೆ ಅರಳಲಿದೆ!
ಫಿಲಂಫೇರ್ ಪ್ರಶಸ್ತಿಗಳ ಬಂಪರ್ ಬೆಳೆಯಿಂದ ಉಲ್ಲಸಿತಗೊಂಡಿರುವ ಕೃಷ್ಣಪ್ಪ ಅಂಡ್ ಟೀಮ್ "ಮೊಗ್ಗಿನ ಮನಸು" ಚಿತ್ರವನ್ನು ಮರಳಿ ತೆರೆಕಾಣಿಸಲು ಸಿದ್ಧತೆ ನಡೆಸಿದೆ. 'ಮೊಗ್ಗಿನ ಮನಸು' ತೆರೆಕಂಡಿದ್ದೇ ಅನೇಕರಿಗೆ ಗೊತ್ತಿಲ್ಲ. ಚಿತ್ರ ಎದುರಿಸಿದ ಅಡೆತಡೆ ಒಂದೆರಡಲ್ಲ. ವಿವಾದಗಳಿಂದ ಸಿನಿಮಾ ತೆರೆಕಾಣುವುದು ವಿನಾಕಾರಣ ವಿಳಂಬವಾಯ್ತು. ಸೆನ್ಸಾರ್ನಿಂದ ಮತ್ತಷ್ಟು ತಡವಾಯ್ತು.
ಅಂತೂಇಂತೂ ಸಿನಿಮಾ ತೆರೆಕಂಡಿತು ಎಂದು ಸಮಾಧಾನದ ಉಸಿರು ಬಿಡುವ ಹೊತ್ತಿಗೆ, ಯಾವತ್ತೂ ಇಲ್ಲದ ಬಾಂಬ್ ದಾಳಿ ಬೆಂಗಳೂರಲ್ಲಿ ಸಂಭವಿಸಿತು. ಇವೆಲ್ಲ ಕಾರಣದಿಂದಾಗಿ 'ಮೊಗ್ಗಿನ ಮನಸು' ಹೆಚ್ಚು ಪ್ರೇಕ್ಷಕರನ್ನು ತಲುಪುವುದು ಸಾಧ್ಯವಾಗಲಿಲ್ಲ. ಈಗ ಪ್ರಶಸ್ತಿಗಳ ಕಾರಣದಿಂದಾಗಿ ಚಿತ್ರ ಸುದ್ದಿಯಲ್ಲಿದೆ. ಈ ಸಂದರ್ಭವನ್ನು ಬಳಸಿಕೊಂಡು ಚಿತ್ರವನ್ನು ರಾಜ್ಯದ ವಿವಿಧೆಡೆ ಮತ್ತೆ ತೆರೆಕಾಣಿಸುತ್ತೇವೆ ಎಂದು ನಿರ್ದೇಶಕ ಶಶಾಂಕ್ ಹೇಳಿದ್ದಾರೆ.
ಮೊಗ್ಗಿನ ಮನಸು ಚಿತ್ರ ಹಣಕಾಸಿನ ದೃಷ್ಟಿಯಿಂದ ಕೈಕಚ್ಚಿತು ಎನ್ನುವುದನ್ನು ಶಶಾಂಕ್ ಒಪ್ಪುವುದಿಲ್ಲ. ನಾವು ನಿರೀಕ್ಷಿಸಿದಂತೆ ಕೋಟಿಗಟ್ಟಲೆ ಲಾಭ ಸಂಪಾದಿಸಲಿಲ್ಲ. ಸಣ್ಣ ಪ್ರಮಾಣದ ಲಾಭವಂತೂ ಬಂದಿದೆ ಎನ್ನುವುದು ಅವರ ಅನಿಸಿಕೆ. ಗುಣಮಟ್ಟದ ಚಿತ್ರ ಮಾಡಿದರೆ ಪ್ರತಿಫಲ ಇದ್ದೇ ಇದೆ ಎನ್ನುವುದನ್ನು ಮೊಗ್ಗಿನ ಮನಸು ಸಾಬೀತುಪಡಿಸಿದೆ. ಈ ಚಿತ್ರಕ್ಕೆ ದೊರಕಿರುವ ಜನಮನ್ನಣೆ ಹಾಗೂ ಬಂಪರ್ ಪ್ರಶಸ್ತಿಗಳು ನಮಗೆಲ್ಲ ಖುಷಿ ತಂದಿದೆ" ಎಂದು ಶಶಾಂಕ್ ನಗುತ್ತಾರೆ.
ಅಂದಹಾಗೆ, ಶಶಾಂಕ್ರ ಹೊಸಚಿತ್ರ 'ಕೃಷ್ಣನ್ ಲವ್ ಸ್ಟೋರಿ' ಅಕ್ಟೋಬರ್ನಲ್ಲಿ ಸೆಟ್ಟೇರಲಿದೆ. ರಾವಣ ಚಿತ್ರದ ನಿರ್ಮಾಪಕರು ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ತಾಜಮಹಲ್ನ ಅಜಯ್ ನಾಯಕ. ರಾಧಿಕಾ ಪಂಡಿತ್ ನಾಯಕಿ ಆಗುತ್ತಾರಾ? ಗಾಂಧಿನಗರದ ಪ್ರಕಾರ ಹೌದು.
(ದಟ್ಸ್ ಕನ್ನಡ ಚಿತ್ರವಾರ್ತೆ)